ಉಡುಪಿ: ಹಿಜಬ್ ವಿವಾದದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.
ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗಳು ಆರಂಭವಾಗಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಇರುವ ತರಗತಿಯಲ್ಲಿ ಯಾವುದೇ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂಬ ಉದ್ದೇಶದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಸದ್ಯ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿರುವ ಎಂಜಿಎಂ ಕಾಲೇಜು ತಿಳಿಸಿದೆ. ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇದೀಗ ರಾಜ್ಯಾದ್ಯಂತ ಹಿಜಬ್ ಪ್ರತಿಭಟನೆ ನಡೆಯುತ್ತಿದ್ದು, ಹೈಕೋರ್ಟ್ ತನ್ನ ಮುಂದಿನ ಆದೇಶದವರೆಗೂ ಶಾಲಾ, ಕಾಲೇಜುಗಳಿಗೆ ಹಿಜಬ್ ಧರಿಸದೇ ವಿದ್ಯಾರ್ಥಿನಿಯರು ಹಾಜರಾಗಬೇಕೆಂದು ಸೂಚಿಸಿದೆ. ಆದರೂ ವಿದ್ಯಾರ್ಥಿನಿಯರು ಕೋರ್ಟ್ ಆದೇಶಕ್ಕೆ ಕೇರ್ ಮಾಡದೇ ಹಿಜಬ್ ಧರಿಸಿಯೇ ತರಗತಿಗೆ ಹಾಜರಾಗುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…