ಉಡುಪಿ:ನೇತ್ರಾವತಿ ಎಕ್ಸ್ಪ್ರೆಸ್ನ ಬೋಗಿ ನಂ.16345ರಲ್ಲಿ ರಾಜಸ್ಥಾನ ಮೂಲದ ಇಬ್ಬರು ವ್ಯಕ್ತಿಗಳನ್ನು ರೈಲ್ಪೆ ಪೊಲೀಸರು ಇಂದ್ರಾಳಿ ರೈಲ್ಪೇ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಬಂಧಿಸಿ, ನಗದು ವಶ ಪಡಿಸಿಕೊಂಡಿದ್ದಾರೆ.
ರೈಲಿನಲ್ಲಿ ಪದೇ ಪದೇ ನಡೆಯುವ ಕಳ್ಳತನ ಪತ್ತೆಗಾಗಿ ರೈಲ್ವೆ ರಕ್ಷಣಾ ಸಿಬ್ಬಂದಿ ಹೆಚ್ಚುವರಿಯಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ ತಪಾಸಣೆ ನಡೆಸುವಾಗ ರೈಲಿನ ಎಸಿ ಬೋಗಿಯಲ್ಲಿದ್ದ ಇಬ್ಬರ ನಡವಳಿಕೆ ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಟಿಕೆಟ್ ಪರಿಶೀಲಿಸಿದಾಗ ಟಿಕೆಟ್ನಲ್ಲಿದ್ದ ಹೆಸರಿಗೂ ಆರೋಪಿಗಳ ಹೆಸರಿಗೂ ವ್ಯತ್ಯಾಸವಿದ್ದ ಹಿನ್ನೆಲೆಯಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಆಗ ನಗದು ಪತ್ತೆಯಾಗಿದೆ.
ಆರೋಪಿಗಳನ್ನು ವಶಪಡಿಸಿಕೊಂಡ ರೈಲ್ವೆ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಅರೋಪಿಗಳ ವಿಚಾರಣೆ ಮುಂದುವರಿದಿದ್ದು, ವಿಚಾರಣೆ ವೇಳೆ ಜಾಗದ ಖರೀದಿಗಾಗಿ ಹಣ ತಂದಿರುವುದಾಗಿ ತಿಳಿಸಿದ್ದಾರೆ.
ಆದರೆ ಹವಾಲಾ ಹಣ ಅಕ್ರಮ ಸಾಗಾಟದ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಲೋಕಸಭೆಯ ಉಪ ಚುನಾವಣೆಗೂ ಹಾಗೂ ಈ ಹಣಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಬಗ್ಗೆ ಮಣಿಪಾಲ ಹಾಗೂ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಐಟಿ ಅಧಿಕಾರಿಗಳು , ಉಡುಪಿ ತಹಶೀಲ್ದಾರ್, ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಹಣದ ಮೂಲದ ಬಗ್ಗೆ ತೀವ್ರ ಸ್ವರೂಪದ ವಿಚಾರಣೆ ಮುಂದುವರಿದಿದೆ..
ಜಾಹೀರಾತುಗಳು
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…