ಉಡುಪಿ:ನೇತ್ರಾವತಿ ಎಕ್ಸ್ಪ್ರೆಸ್ನ ಬೋಗಿ ನಂ.16345ರಲ್ಲಿ ರಾಜಸ್ಥಾನ ಮೂಲದ ಇಬ್ಬರು ವ್ಯಕ್ತಿಗಳನ್ನು ರೈಲ್ಪೆ ಪೊಲೀಸರು ಇಂದ್ರಾಳಿ ರೈಲ್ಪೇ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಬಂಧಿಸಿ, ನಗದು ವಶ ಪಡಿಸಿಕೊಂಡಿದ್ದಾರೆ.
ರೈಲಿನಲ್ಲಿ ಪದೇ ಪದೇ ನಡೆಯುವ ಕಳ್ಳತನ ಪತ್ತೆಗಾಗಿ ರೈಲ್ವೆ ರಕ್ಷಣಾ ಸಿಬ್ಬಂದಿ ಹೆಚ್ಚುವರಿಯಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ ತಪಾಸಣೆ ನಡೆಸುವಾಗ ರೈಲಿನ ಎಸಿ ಬೋಗಿಯಲ್ಲಿದ್ದ ಇಬ್ಬರ ನಡವಳಿಕೆ ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಟಿಕೆಟ್ ಪರಿಶೀಲಿಸಿದಾಗ ಟಿಕೆಟ್ನಲ್ಲಿದ್ದ ಹೆಸರಿಗೂ ಆರೋಪಿಗಳ ಹೆಸರಿಗೂ ವ್ಯತ್ಯಾಸವಿದ್ದ ಹಿನ್ನೆಲೆಯಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಆಗ ನಗದು ಪತ್ತೆಯಾಗಿದೆ.
ಆರೋಪಿಗಳನ್ನು ವಶಪಡಿಸಿಕೊಂಡ ರೈಲ್ವೆ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಅರೋಪಿಗಳ ವಿಚಾರಣೆ ಮುಂದುವರಿದಿದ್ದು, ವಿಚಾರಣೆ ವೇಳೆ ಜಾಗದ ಖರೀದಿಗಾಗಿ ಹಣ ತಂದಿರುವುದಾಗಿ ತಿಳಿಸಿದ್ದಾರೆ.
ಆದರೆ ಹವಾಲಾ ಹಣ ಅಕ್ರಮ ಸಾಗಾಟದ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಲೋಕಸಭೆಯ ಉಪ ಚುನಾವಣೆಗೂ ಹಾಗೂ ಈ ಹಣಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಬಗ್ಗೆ ಮಣಿಪಾಲ ಹಾಗೂ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಐಟಿ ಅಧಿಕಾರಿಗಳು , ಉಡುಪಿ ತಹಶೀಲ್ದಾರ್, ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಹಣದ ಮೂಲದ ಬಗ್ಗೆ ತೀವ್ರ ಸ್ವರೂಪದ ವಿಚಾರಣೆ ಮುಂದುವರಿದಿದೆ..
ಜಾಹೀರಾತುಗಳು
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…