ಉಡುಪಿ: ಎರಡನೇ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರ ಶಾಂತ ರೀತಿಯಲ್ಲಿ ಆರಂಭವಾಗಿದ್ದು, ಯಾವುದೇ ಗೊಂದಲಗಳು ಉಂಟಾಗಲಿಲ್ಲ. ಆದರೆ ಪರೀಕ್ಷೆಗೆ ಹಿಜಾಬ್ ಹೋರಾಟಗಾರ್ತಿಯರೆಲ್ಲರೂ ಗೈರಾಗಿದ್ದಾರೆ.
ಇಂದು ವಿಜ್ಞಾನ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಗಣಿತ ಪರೀಕ್ಷೆ ನಡೆಯುತ್ತಿದೆ. ಉಡುಪಿಯ ಮೂವರು ಹಿಜಾಬ್ ಹೋರಾಟಗಾರ್ತಿಯರು ಗಣಿತ ಪರೀಕ್ಷೆ ಎದುರಿಸಬೇಕಿತ್ತಾದರೂ, ಅಲ್ಮಾಸ್, ಹಜ್ರಾ, ಆಯೇಷಾ ಎಂಬ ಮೂವರೂ ಗೈರಾಗಿದ್ದಾರೆ.
ಇವರು ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೂವರ ಪೈಕಿ ಹಜ್ರಾ ಹಾಗೂ ಆಯೆಷಾ ಹಾಲ್ ಟಿಕೆಟ್ನ್ನೇ ಪಡೆದುಕೊಂಡಿಲ್ಲ. ಆದರೆ ಅಲ್ಮಾಸ್ ಹಾಲ್ ಟಿಕೆಟ್ ಪಡೆದುಕೊಂಡಿದ್ದರೂ, ಪರೀಕ್ಷೆಗೆ ಗೈರಾಗಿದ್ದಾರೆ.
ಶುಕ್ರವಾರ ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿಯರಾದ ಆಲಿಯಾ ಅಸ್ಸಾದಿ ಹಾಗೂ ರೇಶಮ್, ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೆ ಮನೆಗೆ ವಾಪಾಸ್ಸಾಗಿದ್ದರು.
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…