Featured

ಉಡುಪಿ : ಎರಡು ಜಿಲ್ಲೆಯ ಸಹಕಾರಿ ಸಂಘಗಳಿಂದ ಗ್ರಾಹಕರಿಗೆ ಆಗುವ ಸಹಕಾರ ಬೇರೆ ಎಲ್ಲಿಯೂ ಸಿಗದು : ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ – vishwanews24

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಶತಾಭಿವಂದನಂ ಶತಮಾನೋತ್ಸವ ಸಮಾರಂಭ..

ಅವಿಭಜಿತ ಜಿಲ್ಲೆಯ ಸಹಕಾರಿ ಸಂಘಗಳು ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳು ದೇಶಕ್ಕೆ ಮಾದರಿಯಾಗಿವೆ. ಎರಡು ಜಿಲ್ಲೆಯ ಸಹಕಾರಿ ಸಂಘಗಳಿಂದ ಗ್ರಾಹಕರಿಗೆ ಆಗುವ ಸಹಕಾರ ಬೇರೆ ಎಲ್ಲಿಯೂ ಸಿಗದು ಎಂದು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಶತಾಭಿವಂದನಂ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ, ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉಭಯ ಜಿಲ್ಲೆಯ ಅತ್ಯುತ್ತಮ ಕೃಷಿಪತ್ತಿನ ಸಹಕಾರಿ ಸಂಘಗಳಲ್ಲಿ ಗಣಪತಿ ಸಹಕಾರಿ ವ್ಯವಸಾಯಕ ಸಂಘ ಒಂದು. ಇದರ ಕಾರ್ಯವೈಖರಿ ಉತ್ತಮವಾಗಿದೆ ಎಂದರು.

ಮಾಜಿ ಲೋಕಾಯುಕ್ತ ಎನ್‌. ಸಂತೋಷ್‌ ಹೆಗ್ಡೆ ಮಾತನಾಡಿ, ನಮ್ಮ ದೇಶವಿಂದು ಅಭಿವೃದ್ಧಿಯತ್ತ ಸಾಗದೆ ದುರಾಸೆ ಎಂಬ ರೋಗಕ್ಕೆ ಬಲಿಯಾಗುತ್ತಿದೆ. ಈ ರೋಗದಿಂದ ಯಾವಾಗ ಜನ ಮುಕ್ತರಾಗುತ್ತಾರೋ ಅಂದು ದೇಶದ ಅಭಿವೃದ್ದಿ ಸಾಧ್ಯವಾಗಬಹುದು ಎಂದರು.

ಮಣಿಪಾಲದ ಡಾ| ಟಿ.ಎಂ.ಎ.ಪೈ ಫೌಂಡೇಶನ್‌ ಅಧ್ಯಕ್ಷ ಅಶೋಕ್‌ ಪೈ ಅವರು ಮಾತನಾಡಿ ಆಡಳಿತ ಮಂಡಳಿ, ಸಿಬಂದಿ ವರ್ಗದಲ್ಲಿ ಹೊಂದಾಣಿಕೆಯಿದ್ದರೆ ಸಂಸ್ಥೆಯೊಂದು ಈ ಮಟ್ಟಿಗೆ ಬೆಳೆಯಬಹುದು ಎಂಬುದನ್ನು ಈ ಸಂಘ ತೋರಿಕೊಟ್ಟಿದೆ ಎಂದರು. ಕೆಮ್ಮಣ್ಣು ಸಂತ ಥೆರೆಸಾ ಚರ್ಚಿನ ಧರ್ಮಗುರು ವಂ| ಫಿಲಿಪ್‌ ನೇರಿ ಅರಾನ್ಹ ಆಶೀರ್ವಚನ ನೀಡಿದರು. ಶಾಸಕ ಯಶ್‌ಪಾಲ್‌ ಎ. ಸುವರ್ಣ ಶುಭಾಶಂಸನೆ ಮಾಡಿದರು.

ಸಂಘದ ಅಧ್ಯಕ್ಷ ಟಿ. ಸತೀಶ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಸಹಕಾರ ಸಂಘಗಳ ನಿವೃತ ಸಹಾಯಕ ನಿಬಂಧಕ ಅರುಣ್‌ ಕುಮಾರ್‌ಎಸ್‌.ವಿ., ಹಿರಿಯ ಸಹಕಾರಿ ಸರಳಾ ಬಿ. ಕಾಂಚನ್‌, ಯೋಧ ಕಿಶನ್‌, ಗೃಹರಕ್ಷಕ ದಳದ ಕಮಾಂಡರ್‌ ರೋಶನ್‌ ಕುಮಾರ್‌ ಶೆಟ್ಟಿ , ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರು, ನಿವೃತ್ತ ಸಿಬಂದಿ ವರ್ಗದವರನ್ನು ಸಮ್ಮಾನಿಸಲಾಯಿತು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಕೆ. ರಘುಪತಿ ಭಟ್‌, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ್‌ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ಪ್ರಸಾದ್‌ ರಾಜ್‌ ಕಾಂಚನ್‌, ಉದ್ಯಮಿ ಡಾ| ಮಹಮ್ಮದ್‌ ರಫೀಕ್‌, ಗಣ್ಯರಾದ ಡಾ| ದೇವಿ ಪ್ರಸಾದ್‌ ಶೆಟ್ಟಿ ಬೆಳಪು, ಅಶೋಕ್‌ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್‌ ರಾವ್‌ ಪಾಂಗಳ, ಲಕ್ಷ್ಮೀನಾರಾಯಣ ರಾವ್‌, ಜನಾರ್ದನ ತೋನ್ಸೆ, ಕುಸುಮ ರವೀಂದ್ರ, ನಾಗರಾಜ ಕುಂದರ್‌, ಶೋಭಾ ಡಿ. ನಾಯಕ್‌, ಯಶೋಧಾ ಆಚಾರ್ಯ, ಬಿ. ಅಫೆಲ್‌ ಸಾಹೇಬ್‌, ಮಹೇಶ್‌ ಸಾಲ್ಯಾನ್‌, ನಿರ್ದೇಶಕರುಗಳಾದ ನಾರಾಯಣ ಎಸ್‌. ಬಂಗೇರ, ಟಿ. ಗೋಪಾಲಕೃಷ್ಣ ಹೆಗ್ಡೆ, ಹ್ಯೂಬರ್ಟ್‌ ಸಂತಾನ್‌ ಲೂವಿಸ್‌, ರಾಘವೇಂದ್ರ ಪ್ರಸಾದ್‌, ಉಮೇಶ್‌ ಅಮೀನ್‌, ಪುರುಷೋತ್ತಮ ಸಾಲ್ಯಾನ್‌, ಶ್ಯಾಮ ಎನ್‌. ಹರೀಶ್‌ ಶೆಟ್ಟಿ, , ಲೇನಿ ಫೆರ್ನಾಂಡಿಸ್‌, ಲತಾ ಪಿ.ರಾವ್‌, ಲಕ್ಷ್ಮೀ ಉಪಸ್ಥಿತರಿದ್ದರು. ಚಿಂತಕ ದಾಮೋದರ ಶರ್ಮ ಸ್ವಾಗತಿಸಿದರು. ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿ, ವಂದಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago