Featured

ಉಡುಪಿ : ಎರಡು ವಾರದಲ್ಲಿ ಜಿಲ್ಲೆಯ ಪಾಸಿಟಿವ್ ಪ್ರಮಾಣ ಶೇ.1ಕ್ಕಿಂತ ಕಡಿಮೆ ಮಾಡುವ ಗುರಿ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. -Vishwanews24

ಉಡುಪಿ : ಎರಡು ವಾರದಲ್ಲಿ ಜಿಲ್ಲೆಯ ಪಾಸಿಟಿವ್ ಪ್ರಮಾಣ ಶೇ.1ಕ್ಕಿಂತ ಕಡಿಮೆ ಮಾಡುವ ಗುರಿ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. -Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಎರಡು ವಾರಗಳ ಒಳಗೆ ಶೇ.1 ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ, ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ, ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾಗಿರುವ ವಿವಿಧ ಕಾರ್ಯಪಡೆ ತಂಡಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಸೂಚಿಸಿದರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕೋವಿಡ್ ನಿಯಂತ್ರಣಾ ಕ್ರಮಗಳ ಅನುಷ್ಠಾನಕ್ಕೆ ರಚಿಸಿರುವ ವಿವಿಧ ಅಧಿಕಾರಿಗಳ ತಂಡದ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್‌ನಿಂದ ಅಪಾಯವಿಲ್ಲ, ಇದರ ಹರಡುವಿಕೆ ಕಡಿಮೆಯಾಗಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಕಂಡು ಬರುತ್ತಿದೆ, ಸಭೆ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದಿರುವುದು ಹಾಗೂ ಮಾಸ್ಕ್ ಧರಿಸದೇ ಇರುವುದು ಎಲ್ಲೆಡೆ ಕಂಡುಬರುತ್ತಿದೆ, ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಪಾಲನೆಯಾಗದ ಸ್ಥಳಗಳಲ್ಲಿ, ಸಂಬoಧಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಂಡವನ್ನು ವಿಧಿಸಿ. ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನಗರಸಭೆ, ಪುರಸಭೆ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸ್ಕ್ ಜಾಗೃತಿ ಮೂಡಿಸಲು ಅಭಿಯಾನ ಆಯೋಜಿಸಿ, ದಂಡ ವಿಧಿಸಿ, ಜಿಲ್ಲೆಯಲ್ಲಿ ಕೋವಿಡ್ ಶೂನ್ಯ ಪ್ರಕರಣಗಳು ಬರುವವರೆಗೂ ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಕಾರ್ಯಕ್ರಮ ಉತ್ತಮವಾಗಿದ್ದು, ಈಗಾಗಲೇ ಒಟ್ಟು 79% ಲಸಿಕೆ ನೀಡಿದ್ದು, ಲಸಿಕಾ ಕಾರ್ಯಕ್ರಮಕ್ಕೆ ಇನ್ನಷ್ಟು ವೇಗ ನೀಡಿ ಜಿಲ್ಲೆಯಲ್ಲಿ 100% ಗುರಿ ಸಾಧಿಸಬೇಕು, ಜನಪ್ರತಿನಿಧಿಗಳು ಮತ್ತು ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಪಡೆದು, ಲಸಿಕಾ ಮಹಾಮೇಳ ಕಾರ್ಯಕ್ರಮದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಿ, ಪುರಸಭೆ ಮತ್ತು ನಗರಸಭೆ ವ್ಯಾಪ್ತಿಗಳಲ್ಲಿ ವಾರ್ಡ್ ಟಾಸ್ಕ್ ಫೋರ್ಸ್ ಮೂಲಕ ಸಾರ್ವಜನಿಕರಿಗೆ ಲಸಿಕೆ ವಿತರಿಸಿ, 100ಕ್ಕಿಂತ ಹೆಚ್ಚು ಅಸಂಘಟಿತ ವಲಯದ ಕಾರ್ಮಿಕರಿಗೆ ಅವರು ಕೆಲಸ ನಿರ್ವಹಿಸುವ ಸ್ಥಳದಲ್ಲಿಯೇ ಶಿಬಿರ ಆಯೋಜಿಸಿ ಲಸಿಕೆ ನೀಡಿ, ಮೀನುಗಾರರಿಗೆ ವಿಶೇಷ ಅಭಿಯಾನದ ಮೂಲಕ ಲಸಿಕೆ ನೀಡಬೇಕು ಎಂದರು.

ಕೋವಿಡ್ ನಿಯಂತ್ರಣಾ ಉದ್ದೇಶದಿಂದ ವಿವಿಧ ದಾನಿಗಳು ಜಿಲ್ಲಾಡಳಿತಕ್ಕೆ ನೀಡಿರುವ ಅಂಬುಲೆನ್ಸ್ ವಾಹನಗಳಿಗೆ ಸಂಬAಧಪಟ್ಟ ದಾಖಲೆ ಪತ್ರಗಳಿಗೆ ಶೀಘ್ರದಲ್ಲಿ ಅನುಮತಿಯನ್ನು ನೀಡಿ, ವಾಹನಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಗೆ ಕೇರಳ ಮತ್ತು ಮಹಾರಾಷ್ಟçದಿಂದ ಆಗಮಿಸುವವರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಪರಿಶೀಲಿಸಿ. ಕೇರಳದಿಂದ ಬರುವವರನ್ನು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಬೇಕು.

ಕೊಲ್ಲೂರು ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೇರಳದಿಂದ ಪ್ರವಾಸಿಗರು ಆಗಮಿಸಿಲಿದ್ದು, ಅಲ್ಲಿ ಪ್ರತ್ಯೇಕ ಕೋವಿಡ್ ತಪಾಸಣಾ ಕೇಂದ್ರ ಆರಂಭಿಸಿ ಪರಿಶೀಲನೆ ನಡೆಸಬೇಕು ಮತ್ತು ಅಗತ್ಯಬಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ತೆರೆಯಿರಿ. ಕೊಲ್ಲೂರು ಪ್ರವೇಶದ್ವಾರದಲ್ಲಿ ಮತ್ತು ದೇವಸ್ಥಾನದ ವೆಬ್‌ಸೈಟ್‌ನಲ್ಲಿ ಕನ್ನಡ, ಮಲೆಯಾಳಂ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಕೇರಳದಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿರುವ ಬಗ್ಗೆ ಮಾಹಿತಿಯನ್ನು ಅಳವಡಿಸಿ ಎಂದರು.

ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 9000 ಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಯುತ್ತಿದ್ದು, ಇದನ್ನು ಇನ್ನಷ್ಟು ಹೆಚ್ಚು ಮಾಡಬೇಕು. ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾಯಿಸುವ ಪ್ರಮಾಣವನ್ನು ಹೆಚ್ಚು ಮಾಡಬೇಕು. ಈ ಕಾರ್ಯಕ್ಕೆ ಅಗತ್ಯವಿದ್ದಲ್ಲಿ ಪೊಲೀಸ್ ಸಹಕಾರ ಪಡೆಯುವಂತೆ ತಿಳಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್ ಕಂಟೋನ್ಮೆoಟ್ ಜೋನ್‌ಗಳನ್ನು ರಚಿಸುವಂತೆ ಹೇಳಿದರು.

ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಕೋವಿಡ್ ನಿಯಂತ್ರಣ ಕ್ರಮಗಳ ಅನುಷ್ಠಾನ ಕುರಿತು ರಚಿಸಿರುವ ವಿವಿಧ ಅಧಿಕಾರಿಗಳ ತಂಡದ ಮುಖ್ಯಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

11 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

11 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

11 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

11 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

14 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

15 hours ago