ಉಡುಪಿ, : ”ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ. ಆದರೆ ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪನವರು ಹೇಳಿದರು.
ಉಡುಪಿಯ ಮಣಿಪಾಲ್ ಇನ್ ಹೊಟೇಲ್ ಮತ್ತು ಕನ್ವೆಂಶನ್ ಸೆಂಟರ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ. ಮುಸಲ್ಮಾನರ ಓಟು ಬೇಡ ಎಂದು ನಾವು ಹೇಳಿಲ್ಲ” ಎಂದರು.
”ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ, ಆದರೆ ಕಾಂಗ್ರೆಸ್ ನಾಯಕರು ಮುಸ್ಲಿಂ ಸಮುದಾಯವನ್ನು ಒಲಿಸುವಲ್ಲಿ ನಿರತವಾಗಿದೆ. ಅವರೆಲ್ಲರೂ ಕಾಂಗ್ರೆಸ್ಗೆ ಮತ ಹಾಕುತ್ತಾರೆ ಎನ್ನುವ ಭ್ರಮೆಯಲ್ಲಿ ಕಾಂಗ್ರೆಸ್ ಇದೆ” ಎಂದು ಹೇಳಿದ ಅವರು, ”ಕಾಂಗ್ರೆಸ್ ತನ್ನ ಮನೋಭಾವನೆ ಬದಲಾಯಿಸಿಕೊಳ್ಳಬೇಕು” ಎಂದು ಕುಟುಕಿದರು.
”ವಿರೋಧ ಪಕ್ಷದವರಿಗೆ ಎಸಿ ರೂಮ್ನಲ್ಲಿ ಕೂತು ಟ್ವೀಟ್ ಮಾಡುವುದೇ ಅಭ್ಯಾಸವಾಗಿ ಬಿಟ್ಟಿದೆ. ರಾಜ್ಯದಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ ಆಗಿದೆ” ಎಂದು ಟೀಕಿಸಿದರು.
”ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವ ಹಗಲು ಕನಸನ್ನು ಕಾಣುತ್ತಿದ್ದಾರೆ” ಎಂದು ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…