ಉಡುಪಿ, : ”ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ. ಆದರೆ ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪನವರು ಹೇಳಿದರು.
ಉಡುಪಿಯ ಮಣಿಪಾಲ್ ಇನ್ ಹೊಟೇಲ್ ಮತ್ತು ಕನ್ವೆಂಶನ್ ಸೆಂಟರ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ. ಮುಸಲ್ಮಾನರ ಓಟು ಬೇಡ ಎಂದು ನಾವು ಹೇಳಿಲ್ಲ” ಎಂದರು.
”ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ, ಆದರೆ ಕಾಂಗ್ರೆಸ್ ನಾಯಕರು ಮುಸ್ಲಿಂ ಸಮುದಾಯವನ್ನು ಒಲಿಸುವಲ್ಲಿ ನಿರತವಾಗಿದೆ. ಅವರೆಲ್ಲರೂ ಕಾಂಗ್ರೆಸ್ಗೆ ಮತ ಹಾಕುತ್ತಾರೆ ಎನ್ನುವ ಭ್ರಮೆಯಲ್ಲಿ ಕಾಂಗ್ರೆಸ್ ಇದೆ” ಎಂದು ಹೇಳಿದ ಅವರು, ”ಕಾಂಗ್ರೆಸ್ ತನ್ನ ಮನೋಭಾವನೆ ಬದಲಾಯಿಸಿಕೊಳ್ಳಬೇಕು” ಎಂದು ಕುಟುಕಿದರು.
”ವಿರೋಧ ಪಕ್ಷದವರಿಗೆ ಎಸಿ ರೂಮ್ನಲ್ಲಿ ಕೂತು ಟ್ವೀಟ್ ಮಾಡುವುದೇ ಅಭ್ಯಾಸವಾಗಿ ಬಿಟ್ಟಿದೆ. ರಾಜ್ಯದಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ ಆಗಿದೆ” ಎಂದು ಟೀಕಿಸಿದರು.
”ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವ ಹಗಲು ಕನಸನ್ನು ಕಾಣುತ್ತಿದ್ದಾರೆ” ಎಂದು ಹೇಳಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…