Featured

ಉಡುಪಿ: ಎಸ್ಪಿ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ : ಶ್ರೀನಿಧಿ ಹೆಗ್ಡೆ – vishwanews24

ಉಡುಪಿ: ಎಸ್ಪಿ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ : ಶ್ರೀನಿಧಿ ಹೆಗ್ಡೆ

ಉಡುಪಿ: ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ.ಅರುಣ್ ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಆದರೆ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ವಕೀಲ ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ವಿಷಾದಿಸಿದ್ದಾರೆ.

ಆರಂಭದಲ್ಲಿ ಸಾಕಷ್ಟು ಖ್ಯಾತಿ ಪಡೆದ ಎಸ್ಪಿ ಡಾ.ಅರುಣ್ ಅವರ ಅವಧಿಯಲ್ಲಿ ನಡೆದ ಘನಘೋರ ಅಪರಾಧಗಳನ್ನು ಪತ್ತೆಹಚ್ಚುವಲ್ಲಿ ಅವರ ನೇತೃತ್ವದಲ್ಲಿ ಜಿಲ್ಲಾ ಪೋಲಿಸ್ ವಿಫಲವಾಗಿರುವುದು ನಗ್ನ ಸತ್ಯ. ಕ್ಷುಲ್ಲಕ ಕಾರಣಕ್ಕೆ ಪೋಲಿಸ್ ಸಿಬ್ಬಂದಿಗಳನ್ನು ಅಮಾನತು ಮಾಡುತ್ತ ಬ್ರಿಟಿಷ್ ಮಾದರಿ ಪೋಲಿಸಿಂಗ್ ಅನ್ನು ಬಿಟ್ಟು ಅವರು ತಮ್ಮ ಎಸಿ ಕೋಣೆಯಿಂದ ಹೊರಬಂದು ವಾಸ್ತವವನ್ನು ಅರಿತು ಕರ್ತವ್ಯವನ್ನು ನಿರ್ವಹಿಸಬೇಕು.

ಬ್ರಹ್ಮಾವರ ಠಾಣೆಯ ಲಾಕಪ್ ನಲ್ಲಿ ಆರೋಪಿ ಮೃತಪಟ್ಟಿದ್ದಾನೆ. ಈ ಘಟನೆಯಲ್ಲೂ ಕೇವಲ ಸಿಬ್ಬಂದಿ, ಪಿಎಸ್ಐ ಗಳ ಮೇಲೆ ಕ್ರಮ ಕೈಗೊಂಡರೇ ಮುಗಿಯಿತೇ..? ಜಿಲ್ಲಾ ಪೋಲಿಸ್ ಯಾಕಿಷ್ಟು ವಿಫಲವಾಗುತ್ತಿದೆ ಎಂಬ ಬಗ್ಗೆ ಎಸ್ಪಿಯವರು ಆತ್ಮವಲೋಕನ ಮಾಡಿಕೊಂಡರೇ ಸಮಸ್ಯೆಗೆ ಪರಿಹಾರ ಸಿಗಬಹುದು.

ಜಿಲ್ಲೆಯಲ್ಲಿ ನಿರಂತರ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಹೊರ ರಾಜ್ಯದ ಚಡ್ಡಿ ಗ್ಯಾಂಗ್ ಇಲ್ಲಿ ಕಳ್ಳತನ ನಡೆಸಿದೆ. ಸರಕಾರ ವಸತಿ ಗೃಹಕ್ಕೆ ನುಗ್ಗಿ ಆರು ಮನೆಯ ಬೀಗ ಒಡೆದು, ಮೂರು ಮನೆಯಿಂದ ಚಿನ್ನಾಭರಣ ದೋಚಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವೃದ್ದ ಮಹಿಳೆಯನ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದುಕೊಂಡು ಹೋದ ಘಟನೆಗಳು ನಡೆದಿದೆ.

ದಲಿತ ಯುವಕನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದಲ್ಲಿಯೂ ಯಾವೊಬ್ಬ ಆರೋಪಿಯನ್ನು ಬಂಧಿಸಿಲ್ಲ. ಇದರ ನೇರಹೊಣೆಯನ್ನು ಎಸ್ಪಿಯವರೇ ಹೊರಬೇಕು. ತಾವು ಕಚೇರಿಯಿಂದ ಹೊರಬಂದು, ಜಿಲ್ಲೆಯನ್ನು ಸುತ್ತಾಡಿ ಜನರ ಪ್ರಶ್ನೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸಬೇಕೇ ವಿನಃ ಸಿಬ್ಬಂದಿಗಳನ್ನು ಅಮಾನತು ಮಾಡುವುದರಿಂದ ಯಾವುದೇ ಪರಿಹಾರ ಸಿಗುವುದಿಲ್ಲ.

ಭ್ರಷ್ಟಾಚಾರ ಮುಕ್ತ ಉಡುಪಿ ಮಾಡಲು ತಾವು ಪಣ ತೊಟ್ಟಿರುವುದು ಖುಷಿಯ ವಿಚಾರ. ಆದರೆ ಕ್ಷುಲ್ಲಕ ಕಾರಣಕ್ಕೆ ಸಿಬ್ಬಂದಿಗಳನ್ನು ಅಮಾನತು ಮಾಡುತ್ತಾ ಹೋದರೇ ನಾಳೆ ಜಿಲ್ಲೆಯಲ್ಲಿ ಪೋಲಿಸಿಂಗ್ ಮಾಡಲು ಯಾರು ಸಿದ್ದರಿರುವುದಿಲ್ಲ. ಜಿಲ್ಲಾ ಪೋಲಿಸ್ ಅಧಿಕಾರಿಯವರು ಪೋಲಿಸ್ ಸಿಬ್ಬಂದಿಗಳ ವಿಶ್ವಾಸವನ್ನು ಪಡೆದು ತಂಡವಾಗಿ ಕೆಲಸ ನಿರ್ವಹಿಸಿ, ಜಿಲ್ಲೆಯ ಜನೆತೆಗೆ ನ್ಯಾಯ ದೊರಕಿಸಿ ಕೊಡಲಿ.

ಭಾರತ ದೇಶದಲ್ಲಿ ಸಂವಿಧಾನದ ಚೌಕಟ್ಟಿನಲ್ಲಿ ಪೋಲಿಸ್ ವ್ಯವಸ್ಥೆ ಬರುತ್ತದೆ. ಪೋಲಿಸರಿಂದಾಗುವ ಅನ್ಯಾಯಗಳಿಗೆ ಸಾರ್ವಜನಿಕರು ನ್ಯಾಯಾಲಯದ ಮೊರೆ ಹೋಗುತ್ತಾರೆ. ದಕ್ಷ ಎಸ್ಪಿಯವರು ಕೆಲವು ವಿಚಾರದಲ್ಲಿ ರಾಜ್ಯ ಹೈಕೋರ್ಟಿನ ತೀರ್ಪನ್ನು ಕಡೆಗಣಿಸಿ, ತನ್ನ ಅಹಂ ಪ್ರತಿಷ್ಟೆಯನ್ನು ಸ್ಥಾಪಿಸಲು ಹೊರಟಿರುವುದು ಅವರಿಗೆ ಶೋಭೆ ತರುವುದಿಲ್ಲ. ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಳ್ಳುವ ದಿನ ದೂರವಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

21 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago