ಉಡುಪಿ: ಉಡುಪಿ ಪೊಲೀಸ್ ಅಧೀಕ್ಷರಾಗಿದ್ದ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಿಸಿದೆ. ಪ್ರಸ್ತುತ ಹರಿರಾಂ ಶಂಕರ್ ಅವರು ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಉಡುಪಿ ಪೊಲೀಸ್ ಅಧೀಕ್ಷಕರಾಗಿದ್ದ ಡಾ. ಅರುಣ್ ಕೆ ಅವರು ಜಿಲ್ಲೆಯಲ್ಲಿ ದಕ್ಷ ಎಸ್ಪಿ ಎಂಬ ಹೆಸರಿಗೆ ಪಾತ್ರರಾಗಿದ್ದು ಯಾವುದೇ ರೀತಿಯ ಪ್ರಭಾವಕ್ಕೆ ಒಳಗಾಗದೆ ಕಟ್ಟುನಿಟ್ಟಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ದಕ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳನ್ನು ತಡೆಗಟ್ಟಲು ಇಂತಹ ಪೊಲೀಸ್ ಅಧೀಕ್ಷಕರ ಅಗತ್ಯತೆ ಇದೆ ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಕೇಳಿಬಂದಿತ್ತು.
ನೂತನ ಎಸ್ಪಿ ಹರಿರಾಂ ಶಂಕರ್ ಅವರು ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಕುಂದಾಪುರ ಎಎಸ್ಪಿಯಾಗಿದ್ದರು. ಅಲ್ಲದ ಮಂಗಳೂರು ನಗರ ಡಿಸಿಪಿಯಾಗಿ, ಹಾಸನ ಜಿಲ್ಲಾ ಎಸ್ಪಿಯಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…