ಉಡುಪಿ: ಉಡುಪಿ ಪೊಲೀಸ್ ಅಧೀಕ್ಷರಾಗಿದ್ದ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಿಸಿದೆ. ಪ್ರಸ್ತುತ ಹರಿರಾಂ ಶಂಕರ್ ಅವರು ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಉಡುಪಿ ಪೊಲೀಸ್ ಅಧೀಕ್ಷಕರಾಗಿದ್ದ ಡಾ. ಅರುಣ್ ಕೆ ಅವರು ಜಿಲ್ಲೆಯಲ್ಲಿ ದಕ್ಷ ಎಸ್ಪಿ ಎಂಬ ಹೆಸರಿಗೆ ಪಾತ್ರರಾಗಿದ್ದು ಯಾವುದೇ ರೀತಿಯ ಪ್ರಭಾವಕ್ಕೆ ಒಳಗಾಗದೆ ಕಟ್ಟುನಿಟ್ಟಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ದಕ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳನ್ನು ತಡೆಗಟ್ಟಲು ಇಂತಹ ಪೊಲೀಸ್ ಅಧೀಕ್ಷಕರ ಅಗತ್ಯತೆ ಇದೆ ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಕೇಳಿಬಂದಿತ್ತು.
ನೂತನ ಎಸ್ಪಿ ಹರಿರಾಂ ಶಂಕರ್ ಅವರು ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಕುಂದಾಪುರ ಎಎಸ್ಪಿಯಾಗಿದ್ದರು. ಅಲ್ಲದ ಮಂಗಳೂರು ನಗರ ಡಿಸಿಪಿಯಾಗಿ, ಹಾಸನ ಜಿಲ್ಲಾ ಎಸ್ಪಿಯಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…