ಉಡುಪಿ: ಕಾಂಗ್ರೆಸ್ ರಾಜಕೀಯ ಒತ್ತಡ ಬಳಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿಯವರನ್ನು ವರ್ಗಾವಣೆ ಮಾಡಲು ಯತ್ನಸುತ್ತಿದ್ದು, ಒಂದು ವೇಳೆ ಎಸ್ಪಿ ಅವರನ್ನು ವರ್ಗಾವಣೆ ಮಾಡಿದರೆ ಜಿಲ್ಲೆಯಲ್ಲಿ ಹೋರಾಟ ನಡೆಸುತ್ತೇವೆ ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಬಂದ್ ವೇಳೆ ಕಾರ್ಯಕರ್ತರು ಬಲವಂತವಾಗಿ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿಸಿದ್ದಲ್ಲದೇ, ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿಯವರು ಉದ್ರಿಕ್ತರ ಮೇಲೆ ಲಾಠಿ ಚಾರ್ಜ್ ನಡೆಸಲು ಆದೇಶ ಕೊಟ್ಟಿದ್ದರು. ಆದರೆ ಆಳುವ ಪಕ್ಷ ಹೇಳಿದಂತೆ ಎಸ್ಪಿ ನಿಂಬರ್ಗಿ ನಡೆದುಕೊಂಡಿಲ್ಲ ಎಂದು ಅವರನ್ನು ವರ್ಗಾವಣೆ ಮಾಡಲು ಭಾರೀ ರಾಜಕೀಯ ಪಿತೂರಿ ನಡೆಯುತ್ತಿದೆ. ಇತ್ತೀಚೆಗೆ ಸಚಿವೆ ಜಯಮಾಲಾಗೆ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು ಎಸ್ಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ಹೇಳಿದರು.
ಒಂದು ವೇಳೆ ರಾಜಕೀಯ ಒತ್ತಡದಿಂದ ಎಸ್ಪಿಯವರನ್ನು ವರ್ಗಾವಣೆ ಮಾಡಿದರೆ, ಬಿಜೆಪಿ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತದೆ. ಅಲ್ಲದೇ ಈಗಾಗಲೇ ನಾವು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಸ್ಪಷ್ಟವಾಗಿ ಹೇಳಿದ್ದೇವೆ. ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಿ. ವರ್ಗಾವಣೆ ಮಾಡುವುದು ಸರ್ಕಾರದ ಹಕ್ಕು. ಸರ್ಕಾರದ ಹಕ್ಕನ್ನು ನಾವು ಪ್ರಶ್ನೆ ಮಾಡುವುದಿಲ್ಲ. ಆದರೆ ರಾಜಕೀಯ ಪ್ರೇರಿತ ವರ್ಗಾವಣೆ ಮಾಡಿದರೇ, ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…