Featured

ಉಡುಪಿ: ಎಸ್ ಎಸ್ ಎಲ್ ಸಿ ಸಾಧಕಿ ಗಾಯತ್ರಿ ಯವರಿಗೆ ಯಶ್ ಪಾಲ್ ಸುವರ್ಣ ಅಭಿನಂದನೆ.. Vishwnaews24

ಉಡುಪಿ: ಎಸ್ ಎಸ್ ಎಲ್ ಸಿ ಸಾಧಕಿ ಗಾಯತ್ರಿ ಯವರಿಗೆ ಯಶ್ ಪಾಲ್ ಸುವರ್ಣ ಅಭಿನಂದನೆ..

ಉಡುಪಿ: ಶಿಕ್ಷಣಕ್ಕಿಂತ ಇಸ್ಲಾಂ ಮತವೇ ಮುಖ್ಯ ಎಂದು ಜಗ್ಗತ್ತಿಗೆ ಸಾರಿದ್ದ ಕೆಲವು ಹಿಜಾಬ್ ಹೋರಾಟಗಾರ್ತಿಯರಿಗೆ ಉಡುಪಿ ಸರಕಾರಿ ಬಾಲಕಿಯರ ಕಾಲೇಜಿನ ಆವರಣದಲ್ಲಿದ್ದ ಪ್ರೌಢಶಾಲೆಯ ಬಾಲಕಿ ಗಾಯತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗುವುದರ ಮೂಲಕ ಶಿಕ್ಷಣವೇ ಮುಖ್ಯ ಎಂದು ಸಾಭೀತುಪಡಿಸಿದ್ದಾಳೆ ಎಂದು ಉಡುಪಿ ಬಾಲಕಿಯರ ಸರಕಾರಿ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಅವರು ಶನಿವಾರ ವಿದ್ಯಾರ್ಥಿನಿ ಗಾಯತ್ರಿಯನ್ನು ಅಭಿನಂದಿಸಿ ಮಾತನಾಡಿದರು
ಜೀವನದಲ್ಲಿ ಶಿಕ್ಷಣಕ್ಕೆ ಮಹತ್ವ ಕೊಟ್ಟರೆ ಯಾವುದೇ ಸಮಸ್ಯೆಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಈ ವಿದ್ಯಾರ್ಥಿನಿ ಸಾಕ್ಷಿ. ಶಾಲೆಯ ಕೀರ್ತಿಪತಾಕೆ ಹಾರಿಸಿದ ಹುಡುಗಿಯ ಬಗ್ಗೆ ಆಡಳಿತ ಮಂಡಳಿಗೆ ಹೆಮ್ಮೆಯಿದೆ.
ಉಡುಪಿಯ ಈ ಕಾಲೇಜಿಗೆ ವಿಶೇಷ ಮಾನ್ಯತೆ ಇದೆ. ಬಡವರ ಮನೆ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಸರಕಾರೇತರ ಸಹಾಯಗಳನ್ನು ಕೂಡ ಇಲ್ಲಿ ನೀಡಲಾಗುತ್ತದೆ. ಆದರೆ ಎಲ್ಲಾ ಬಣ್ಣ ಮಸಿ ನುಂಗಿತು ಎಂಬ ಗಾದೆ ಮಾತಿನಂತೆ ಹಿಜಾಬ್ ವಿವಾದದ ನಂತರ ಆಡಳಿತ ಮಂಡಳಿ ಮತ್ತು ಶಿಕ್ಷಕರು ಕುಸಿದು ಹೋಗಿದ್ದರು. ಈಗ ಈ ಶಾಲೆಯ ಆಡಳಿತ ಮಂಡಳಿಗೆ ಗಾಯತ್ರಿ ಬೂಸ್ಟರ್ ಡೋಸ್ ಕೊಟ್ಟಿದ್ದಾಳೆ ಎಂದರು.
625 ಅಂಕ ದೊರಕುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ.  ಆದರೆ ರ್ಯಾಂಕ್ ಬರಬೇಕು ಎಂಬ ಆಸೆ ಇತ್ತು. ಪ್ರಯತ್ನ ಮಾಡಿದ್ದೆ, ಪ್ರತಿದಿನ ಮಾಡಿದ ಪಾಠದ ಪಾಯಿಂಟ್ ಮಾಡಿ ಕಲಿಯುತ್ತಿದ್ದೇನು. ನಾನು ಸರಕಾರಿ ಶಾಲೆಯಲ್ಲಿ ಕಲಿತರೂ ಎಲ್ಲ ಸೌಲಭ್ಯ ಇತ್ತು, ಉತ್ತಮ ಗುಣಮಟ್ಟದ ಶಿಕ್ಷಕರು ಇದ್ದಾರೆ. ಕೆಲವರು ಸರಕಾರಿ ಶಾಲೆಯ ಬಗ್ಗೆ ಕೀಳರಿಮೆ ಬೆಳೆಸಿಕೊಂಡಿದ್ದಾರೆ.ಅದು ಮೊದಲು ಅವರ ಮನಸ್ಸಿನಿಂದ ಹೋಗಬೇಕು. ಮುಂದೆ ವಿಜ್ಞಾನ ವಿಭಾಗದಲ್ಲಿ ಪಿ ಸಿ ಎಮ್ ಬಿ ಕಲಿತು ಹೃದ್ರೋಗ ತಜ್ಞೆಯಾಗಬೇಕೆಂಬ ಆಸೆಯಿದೆ.
ಗಾಯತ್ರಿ ವಿದ್ಯಾರ್ಥಿನಿ ಹೃದ್ರೋಗ ತಜ್ಞೆಯಾಗಬೇಕೆಂಬ ಆಸೆ ಹೊಂದಿದ್ದಾಳೆ. ಅವಳ ಮುಂದಿನ ಶಿಕ್ಷಣದ ಖರ್ಚನ್ನು ನನ್ನ ವೈಯಕ್ತಿಕ ನೆಲೆಯಲ್ಲಿ ಭರಿಸುತ್ತೇನೆ.
ಯಶ್ಪಾಲ್ ಸುವರ್ಣ
ಕಾಲೇಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ
Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago