Featured

ಉಡುಪಿ: ಎಸ್ ಐ ಅನಂತ ಪದ್ಮನಾಭ ಅಮಾನತು ಆದೇಶವನ್ನು ವಾಪಾಸು ಪಡೆಯುವಂತೆ ಉಡುಪಿ ಶಾಸಕ ರಘುಪತಿ ಭಟ್ ಆಗ್ರಹ -Vishwanews24

ಉಡುಪಿ : ಯಾವುದೇ ಕಾರಣವಿಲ್ಲದೆ ಸೋಮವಾರ ರಾತ್ರಿ ಉಡುಪಿ ನಗರಠಾಣೆಯ ಠಾಣಾಧಿಕಾರಿಯಾಗಿದ್ದ ಅನಂತ ಪದ್ಮನಾಭ ಅವರನ್ನು ಅಮಾನತು ಮಾಡಿರುವುದು ಖಂಡನೀಯ ಕೂಡಲೇ ಅವರ ಆದೇಶವನ್ನು ವಾಪಾಸು ಪಡೆಯುವಂತೆ ಉಡುಪಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಒಂದು ವಾರದ ಹಿಂದೆ ಅಜ್ಜರಕಾಡು ಪಾರ್ಕಿನಲ್ಲಿ ಒಬ್ಬ ಯುವಕ ಇನ್ನೊಂದು ಧರ್ಮದ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಕಂಡ ಸಾರ್ವಜನಿಕರು ಆ ಯುವಕನಿಗೆ ಸಣ್ಣ ಪ್ರಮಾಣದ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಎಸ್.ಐ. ಅವರು ಆ ಯುವಕನಿಗೆ ಎಚ್ಚರಿಕೆ ನೀಡಿ ಬಿಟ್ಟಿದ್ದಾರೆ. ಆದರೆ 5-6 ದಿನಗಳ ನಂತರ ಇತರರ ಕುಮ್ಮಕ್ಕಿನಿಂದ ಆ ಯುವಕ ತನ್ನ ಮೇಲೆ ಹಲ್ಲೆಯಾಗಿದೆ ಎಂದು ದೂರು ನೀಡಿದ್ದಾನೆ. ನಂತರ ಎಸ್.ಪಿಯವರು ಎಫ್.ಐ.ಆರ್. ಮಾಡಿದ್ದಾರೆ.

ಎಸ್ಪಿಯವರಿಗೆ ನಾನು ಪ್ರಶ್ನೆ ಕೇಳ ಬಯಸುತ್ತೇನೆ ಒರ್ವ ಎಸ್ ಐ ಅವರು ಹಿರಿಯ ಅಧಿಕಾರಿಗಳಿಗೆ ವರದಿ ಮಾಡಿಲ್ಲ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡುವುದಾದರೆ ಅವರದೇ ಕೈಕೆಳಗೆ ಇರುವ ಇನ್ನ ಎಷ್ಟೋ ಠಾಣೆಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಮಾಹಿತಿ ನೀಡುತ್ತೇನೆ ಅವರನ್ನು ಸಹ ಇವರು ಅಮಾನತು ಮಾಡವರೇ ಎಂದು ಪ್ರಶ್ನಿಸಿದರು. ಎರಡು ಧರ್ಮಗಳ ನಡುವೆ ಸೌಹಾರ್ದತೆ ಇರಲಿ ಎಂಬ ಉದ್ದೇಶದಿಂದ ಮಾಡಿದ ಕೆಲಸಕ್ಕೆ ಅಮಾಯಕ ಠಾಣಾಧಿಕಾರಿಯನ್ನು ಅಮಾನತು ಮಾಡಿರುವುದು ಖಂಡನೀಯ. ಒರ್ವ ಜವಾಬ್ದಾರಿಯುತ ಠಾಣಾಧಿಕಾರಿ ಮಾಡಬೇಕಾದ ಕೆಲಸವನ್ನು ಅವರು ಮಾಡಿದ್ದು ಅಂತಹ ಒರ್ವ ಸಭ್ಯ ಅಧಿಕಾರಿಗೆ ಇಂತಹ ಶಿಕ್ಷೆ ನೀಡಿರುವುದನ್ನು ನಾನು ಶಾಸಕನಾಗಿ ಸಹಿಸುವುದಿಲ್ಲ. ಒಂದು ಧರ್ಮದವರ ಒತ್ತಡಕ್ಕೆ ಮಣಿದು ಎಸ್ಪಿಯವರು ಇಂತಹ ನಿರ್ಧಾರ ಕೈಗೊಂಡಿರುವುದು ನನಗೆ ತುಂಬಾ ಬೇಸರವಾಗಿದೆ. ಈ ಘಟನೆಯ ಬಗ್ಗೆ ಈಗಾಗಲೇ ನಾನು ಗೃಹಮಂತ್ರಿ ಮತ್ತು ಪಶ್ಚಿಮ ವಲಯ ಐಜಿಪಿಯವರಿಗೆ ಕೂಡ ಮಾಹಿತಿ ನೀಡಿದ್ದೇನೆ. ಕೂಡಲೇ ಅವರ ಅಮಾನತು ಆದೇಶವನ್ನು ವಾಪಾಸು ಪಡೆದು ಉಡುಪಿಯಲ್ಲೇ ಅವರಿಗೆ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಅನ್ಯ ಕೋಮಿನ ಯುವಕ ಯುವತಿಯರು ಮಾತನಾಡುತಿದ್ದಾಗ ಇನ್ನೊಂದು ಗುಂಪು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಲಾಗಿದೆ ಎಂದು ಉಡುಪಿ ನಗರ ಠಾಣೆ ಉಪ ನಿರೀಕ್ಷಕ, ಇಬ್ಬರು ಹೆಡ್ ಕಾನ್ಸ್ಟೆಬಲ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಅಮಾನತುಗೊಳಿಸಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago