Featured

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ – vishwanews24

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ

ಉಡುಪಿ: ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ‌ ಅವರ ನೇತೃತ್ವದಲ್ಲಿ 2026 ಜನವರಿ 1ರಿಂದ 10ರ ವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.1ರಂದು ಬೆಳಿಗ್ಗೆ 10.30ಕ್ಕೆ ಶಿಬಿರವನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಜ.10ರಂದು ಬೆಳಿಗ್ಗೆ 10.30 ಕ್ಕೆ ಶಿಬಿರದ ಸಮಾರೋಪ ಸಮಾರಂಭದ ನಡೆಯಲಿದೆ ಎಂದರು.

ಶಿಬಿರಕ್ಕೆ ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ. ಶಿಬಿರಾರ್ಥಿಗಳಲ್ಲಿ ಕಂಡುಬರುವ ದೈಹಿಕ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಅನುಗುಣವಾದ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿದಿನ ಶಿಬಿರಾರ್ಥಿಗಳಿಗೆ ಮದ್ಯ ಹಾಗೂ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳು ಮತ್ತು ಜೀವನ ಶೈಲಿ ಬದಲಾವಣೆ ಕುರಿತು ನುರಿತ ತಜ್ಞರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಚಿಕಿತ್ಸೆಯಲ್ಲಿ ಪ್ರತಿದಿನ ಅನಾಮಿಕ ಅಮಲಿಗಳ ಸದಸ್ಯರಿಂದ ಒಂದು ಗಂಟೆಯ ಚರ್ಚೆ ಮತ್ತು ಮದ್ಯ ವಿಮುಕ್ತ ಜೀವನ ನಡೆಸುವ ಬಗ್ಗೆ ಮಾಹಿತಿ ಮತ್ತು ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ರಾತ್ರಿ 7 ರ ನಂತರ ಪ್ರತಿ ದಿನ ಭಜನೆ ಮತ್ತು ಧಾರ್ಮಿಕ ವಿಚಾರಗಳನ್ನು ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿಬಿರದಿಂದ ತೆರಳಿದ ನಂತರವೂ ಶಿಬಿರಾರ್ಥಿಗಳ ಪ್ರಗತಿಯನ್ನು ನಮ್ಮ ಸಮುದಾಯ ಕಾರ್ಯಕರ್ತರು ಮನೆ ಭೇಟಿ, ದೂರವಾಣಿ ಕರೆ ಮತ್ತು ಪತ್ರಗಳನ್ನು ಬರೆಯುವ ಮೂಲಕ ಅವರ ಮದ್ಯಮುಕ್ತ ಜೀವನವನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ಇದರೊಂದಿಗೆ ಒಂದು ವರ್ಷದ ಅವಧಿಯವರೆಗೆ ಮರುಭೇಟಿ ದಿನಾಂಕವನ್ನು ನಿರ್ಧರಿಸಿ ಪ್ರತಿ ತಿಂಗಳು ಶಿಬಿರಾರ್ಥಿಗಳನ್ನು ಪರೀಕ್ಷಿಸಲಾಗುವುದು.ಉದ್ಘಾಟನೆ ದಿನದಂದು ಮದ್ಯವ್ಯಸನದಿಂದ ಮುಕ್ತರಾದ ಸುಮಾರು ಐವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಪ್ರತೀ ವರ್ಷ ಇದನ್ನು ಮಾಡುತ್ತಾ ಬಂದಿದ್ದೇವೆ.ಶಿಬಿರವು ಪುರುಷರಿಗೆ ಮಾತ್ರವೂ ಅಲ್ಲದೆ ಮಹಿಳೆಯರಿಗೂ ಇರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸೌಜನ್ಯ ಶೆಟ್ಟಿ, ನಾಗರಾಜ ಮೂರ್ತಿ, ಡಾ. ಮಾನಸ್ ,ಡಾ.ದೀಪಕ್ ಮಲ್ಯ ಮತ್ತು ಪದ್ಮ ನಾಗರಾಜ್ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

14 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

17 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

17 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago