Featured

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ – vishwanews24

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ

ಉಡುಪಿ: ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ‌ ಅವರ ನೇತೃತ್ವದಲ್ಲಿ 2026 ಜನವರಿ 1ರಿಂದ 10ರ ವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.1ರಂದು ಬೆಳಿಗ್ಗೆ 10.30ಕ್ಕೆ ಶಿಬಿರವನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಜ.10ರಂದು ಬೆಳಿಗ್ಗೆ 10.30 ಕ್ಕೆ ಶಿಬಿರದ ಸಮಾರೋಪ ಸಮಾರಂಭದ ನಡೆಯಲಿದೆ ಎಂದರು.

ಶಿಬಿರಕ್ಕೆ ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ. ಶಿಬಿರಾರ್ಥಿಗಳಲ್ಲಿ ಕಂಡುಬರುವ ದೈಹಿಕ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಅನುಗುಣವಾದ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿದಿನ ಶಿಬಿರಾರ್ಥಿಗಳಿಗೆ ಮದ್ಯ ಹಾಗೂ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳು ಮತ್ತು ಜೀವನ ಶೈಲಿ ಬದಲಾವಣೆ ಕುರಿತು ನುರಿತ ತಜ್ಞರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಚಿಕಿತ್ಸೆಯಲ್ಲಿ ಪ್ರತಿದಿನ ಅನಾಮಿಕ ಅಮಲಿಗಳ ಸದಸ್ಯರಿಂದ ಒಂದು ಗಂಟೆಯ ಚರ್ಚೆ ಮತ್ತು ಮದ್ಯ ವಿಮುಕ್ತ ಜೀವನ ನಡೆಸುವ ಬಗ್ಗೆ ಮಾಹಿತಿ ಮತ್ತು ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ರಾತ್ರಿ 7 ರ ನಂತರ ಪ್ರತಿ ದಿನ ಭಜನೆ ಮತ್ತು ಧಾರ್ಮಿಕ ವಿಚಾರಗಳನ್ನು ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿಬಿರದಿಂದ ತೆರಳಿದ ನಂತರವೂ ಶಿಬಿರಾರ್ಥಿಗಳ ಪ್ರಗತಿಯನ್ನು ನಮ್ಮ ಸಮುದಾಯ ಕಾರ್ಯಕರ್ತರು ಮನೆ ಭೇಟಿ, ದೂರವಾಣಿ ಕರೆ ಮತ್ತು ಪತ್ರಗಳನ್ನು ಬರೆಯುವ ಮೂಲಕ ಅವರ ಮದ್ಯಮುಕ್ತ ಜೀವನವನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ಇದರೊಂದಿಗೆ ಒಂದು ವರ್ಷದ ಅವಧಿಯವರೆಗೆ ಮರುಭೇಟಿ ದಿನಾಂಕವನ್ನು ನಿರ್ಧರಿಸಿ ಪ್ರತಿ ತಿಂಗಳು ಶಿಬಿರಾರ್ಥಿಗಳನ್ನು ಪರೀಕ್ಷಿಸಲಾಗುವುದು.ಉದ್ಘಾಟನೆ ದಿನದಂದು ಮದ್ಯವ್ಯಸನದಿಂದ ಮುಕ್ತರಾದ ಸುಮಾರು ಐವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಪ್ರತೀ ವರ್ಷ ಇದನ್ನು ಮಾಡುತ್ತಾ ಬಂದಿದ್ದೇವೆ.ಶಿಬಿರವು ಪುರುಷರಿಗೆ ಮಾತ್ರವೂ ಅಲ್ಲದೆ ಮಹಿಳೆಯರಿಗೂ ಇರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸೌಜನ್ಯ ಶೆಟ್ಟಿ, ನಾಗರಾಜ ಮೂರ್ತಿ, ಡಾ. ಮಾನಸ್ ,ಡಾ.ದೀಪಕ್ ಮಲ್ಯ ಮತ್ತು ಪದ್ಮ ನಾಗರಾಜ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago