Featured

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ – vishwanews24

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ

ಉಡುಪಿ: ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ‌ ಅವರ ನೇತೃತ್ವದಲ್ಲಿ 2026 ಜನವರಿ 1ರಿಂದ 10ರ ವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.1ರಂದು ಬೆಳಿಗ್ಗೆ 10.30ಕ್ಕೆ ಶಿಬಿರವನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಜ.10ರಂದು ಬೆಳಿಗ್ಗೆ 10.30 ಕ್ಕೆ ಶಿಬಿರದ ಸಮಾರೋಪ ಸಮಾರಂಭದ ನಡೆಯಲಿದೆ ಎಂದರು.

ಶಿಬಿರಕ್ಕೆ ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ. ಶಿಬಿರಾರ್ಥಿಗಳಲ್ಲಿ ಕಂಡುಬರುವ ದೈಹಿಕ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಅನುಗುಣವಾದ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿದಿನ ಶಿಬಿರಾರ್ಥಿಗಳಿಗೆ ಮದ್ಯ ಹಾಗೂ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳು ಮತ್ತು ಜೀವನ ಶೈಲಿ ಬದಲಾವಣೆ ಕುರಿತು ನುರಿತ ತಜ್ಞರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಚಿಕಿತ್ಸೆಯಲ್ಲಿ ಪ್ರತಿದಿನ ಅನಾಮಿಕ ಅಮಲಿಗಳ ಸದಸ್ಯರಿಂದ ಒಂದು ಗಂಟೆಯ ಚರ್ಚೆ ಮತ್ತು ಮದ್ಯ ವಿಮುಕ್ತ ಜೀವನ ನಡೆಸುವ ಬಗ್ಗೆ ಮಾಹಿತಿ ಮತ್ತು ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ರಾತ್ರಿ 7 ರ ನಂತರ ಪ್ರತಿ ದಿನ ಭಜನೆ ಮತ್ತು ಧಾರ್ಮಿಕ ವಿಚಾರಗಳನ್ನು ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿಬಿರದಿಂದ ತೆರಳಿದ ನಂತರವೂ ಶಿಬಿರಾರ್ಥಿಗಳ ಪ್ರಗತಿಯನ್ನು ನಮ್ಮ ಸಮುದಾಯ ಕಾರ್ಯಕರ್ತರು ಮನೆ ಭೇಟಿ, ದೂರವಾಣಿ ಕರೆ ಮತ್ತು ಪತ್ರಗಳನ್ನು ಬರೆಯುವ ಮೂಲಕ ಅವರ ಮದ್ಯಮುಕ್ತ ಜೀವನವನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ಇದರೊಂದಿಗೆ ಒಂದು ವರ್ಷದ ಅವಧಿಯವರೆಗೆ ಮರುಭೇಟಿ ದಿನಾಂಕವನ್ನು ನಿರ್ಧರಿಸಿ ಪ್ರತಿ ತಿಂಗಳು ಶಿಬಿರಾರ್ಥಿಗಳನ್ನು ಪರೀಕ್ಷಿಸಲಾಗುವುದು.ಉದ್ಘಾಟನೆ ದಿನದಂದು ಮದ್ಯವ್ಯಸನದಿಂದ ಮುಕ್ತರಾದ ಸುಮಾರು ಐವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಪ್ರತೀ ವರ್ಷ ಇದನ್ನು ಮಾಡುತ್ತಾ ಬಂದಿದ್ದೇವೆ.ಶಿಬಿರವು ಪುರುಷರಿಗೆ ಮಾತ್ರವೂ ಅಲ್ಲದೆ ಮಹಿಳೆಯರಿಗೂ ಇರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸೌಜನ್ಯ ಶೆಟ್ಟಿ, ನಾಗರಾಜ ಮೂರ್ತಿ, ಡಾ. ಮಾನಸ್ ,ಡಾ.ದೀಪಕ್ ಮಲ್ಯ ಮತ್ತು ಪದ್ಮ ನಾಗರಾಜ್ ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago