Featured

ಉಡುಪಿ:  ಎ.26 ರಂದು ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ :  8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಹಕಾರ ಭಾರತಿ – vishwanews24

ಉಡುಪಿ:  ಎ.26 ರಂದು ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ :  8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಹಕಾರ ಭಾರತಿ

ಉಡುಪಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಭಾರತಿ ಬೆಂಬಲದೊಂದಿಗೆ ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಮೋಹನ್‌ದಾಸ್ ಅಡ್ಯಂತಾಯ (ಕಾರ್ಕಳ), ಭೋಜ ಪೂಜಾರಿ(ಹೆಬ್ರಿ), ಅಶೋಕ್ ರಾವ್(ಕಾಪು), ಹೆರ್ಗ ದಿನಕರ್ ಶೆಟ್ಟಿ(ಉಡುಪಿ), ಕಾಡೂರು ಸುರೇಶ್ ಶೆಟ್ಟಿ(ಕುಂದಾಪುರ), ಸುಬ್ಬಣ್ಣ ಶೆಟ್ಟಿ & ಟಿವಿ.ಪ್ರಾಣೇಶ್ ಯಡಿಯಾಳ್(ಬೈಂದೂರು), ಮಹಿಳಾ ಮೀಸಲಾತಿ ಕ್ಷೇತ್ರದಲ್ಲಿ ಶಾಂತಾ.ಎಸ್.ಭಟ್ (ಬ್ರಹ್ಮಾವರ) ಸ್ಪರ್ಧಿಸಲಿದ್ದಾರೆ ಎಂದರು.

ಸಹಕಾರಿ ಭಾರತಿಯಿಂದ ಕಳೆದ 18 ವರ್ಷ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಕೆಎಮ್‌ಎಫ್ ಪ್ರತಿನಿಧಿಯಾಗಿ ಸ್ಕಾಡ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನಿರಂತರ ಸ್ಥಾನಮಾನಗಳನ್ನು ಪಡೆದಿದ್ದ ಕೊಡವೂರು ರವಿರಾಜ್ ಹೆಗ್ಡೆ ಅವರು, ಚುನಾವಣಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯವರೆಗೆ ಸಹಕಾರ ಭಾರತಿಯೊಂದಿಗೆ ಇದ್ದು, ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಹೊಸಬರಿಗೆ ಅವಕಾಶ ನೀಡಿ ಎಂದು ಹೇಳಿದ್ದರು. ಆದರೆ, ಇದೀಗ ಕಾಂಗ್ರೆಸ್ ಬೆಂಬಲಿತ ಕೂಟದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆ ಮೂಲಕ ಸಹಕಾರ ಭಾರತಿಗೆ ದ್ರೋಹ ಎಸಗಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಬೆಂಬಲಿತವಾಗಿ ಕೊಡವೂರು ರವಿರಾಜ್ ಹೆಗ್ಡೆ, ಮಮತಾ ಶೆಟ್ಟಿ, ಸ್ವತಂತ್ರ ಅಭ್ಯರ್ಥಿಯಾಗಿ ಕಮಲಾಕ್ಷ ಹೆಬ್ಬಾರ್ ಮತ್ತು ಸಿತ್ಮಾ ಆರ್ ಶೆಟ್ಟಿ ಸಹಕಾರ ಭಾರತಿಯ ವಿರುದ್ದ ಸ್ಪರ್ಧಿಸುತ್ತಿದ್ದಾರೆ. ಹೈನುಗಾರರು ಗೊಂದಲಕ್ಕೆ ಒಳಗಾಗದೇ, ಸಹಕಾರ ಭಾರತಿಯ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಬೋಳ ಸದಾಶಿವ ಶೆಟ್ಟಿ, ಜಿಲ್ಲಾ ಪ್ರ‌‌‌ಧಾನ ಕಾರ್ಯದರ್ಶಿ ಸುದೇಶ್ ನಾಯಕ್ ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago