Featured

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ..

ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ..

ಕರಾವಳಿಗೆ ಕೂಲರ್‌ಗಿಂದ ಏಸಿ ಸೂಕ್ತ..

ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್‌ನ ನಿರ್ದೇಶಕ ಕೃಷ್ಣರಾಜ ತಂತ್ರಿ

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ. ಇದರಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್‌ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮಗಿರಿಯ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ಏರ್ ಕಂಡೀಷನರ್ ಕಾರ್ಯನಿರ್ವಹಣೆ: ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತಿದ್ದರು.

ಏಸಿಯು ಕೋಣೆಯಲ್ಲಿರುವ ಗಾಳಿಯನ್ನು ಶುದ್ಧಗೊಳಿಸಿ ತಂಪು ಮಾಡುತ್ತದೆ ಹೊರತು ಹೊರಗಿನ ಗಾಳಿಯನ್ನು ಒಳಗಡೆ ತೆಗೆದುಕೊಳ್ಳುವು ದಿಲ್ಲ. ಏಸಿಯ ಇಂಡೋರ್ ಮತ್ತು ಔಡೋರ್ ಯುನಿಟ್‌ಗಳಿಗೆ 10ಅಡಿಗಳ ಅಂತರ ಅಗತ್ಯ ಇರಬೇಕು. ಇಲ್ಲದಿದ್ದರೆ ಅದು ಹೆಚ್ಚು ಕೂಲ್ ಆಗುವುದಿಲ್ಲ ಎಂದರು.

ಇದನ್ನೂ ಓದಿ :

ಇಂದು ವಾತಾವರಣದಲ್ಲಿ ಉಷ್ಣಾಂಶದ ತೀವ್ರ ಏರಿಕೆ ಹಿನ್ನೆಲೆಯಲ್ಲಿ ಮನೆ, ಕಚೇರಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಏರ್ ಕಂಡೀಷನರ್ ಅಳವಡಿಕೆ, ಬಳಕೆ ಹೆಚ್ಚುತ್ತಿದೆ. ಏಸಿ ಆರೋಗ್ಯ ಚೆನ್ನಾಗಿದ್ದರೆ ಅದು ನಮ್ಮ ಆರೋಗ್ಯಕ್ಕೂ ಪೂರಕ ವಾಗಿರುತ್ತದೆ. ಏರ್ ಕಂಡೀಷನರ್ ವ್ಯವಸ್ಥೆಯ ಸಮರ್ಪಕ ಬಳಕೆ, ಸೂಕ್ತ ನಿರ್ವಹಣೆ ಮಾಡದಿದ್ದರೆ ವಿದ್ಯುತ್ ವೆಚ್ಚ ಹೆಚ್ಚಳದ ಜತೆಗೆ ಏಸಿ ಕಾರ್ಯಕ್ಷಮತೆ ಕುಸಿದು, ಅವಸರದ ದುರಸ್ಥಿ, ವೆಚ್ಚಗಳು ಹೆಚ್ಚಲಿವೆ ಎಂದರು.

ಏರ್ ಕಂಡೀಷನರ್‌ಗಳು 24ರಿಂದ 26ಡಿಗ್ರಿ ಸೆಲ್ಶಿಯಸ್‌ನಲ್ಲಿ ಕಾರ್ಯ ನಿರ್ವಹಿಸಿದರೆ ವಿದ್ಯುತ್ ಬಳಕೆ ನಿಯಂತ್ರಣ, ಅನಗತ್ಯ ಒತ್ತಡ ತಪ್ಪಿಸಬಹುದು. ಕರಾವಳಿಯಲ್ಲಿ ಏರ್ ಕಂಡೀಷನರ್‌ಗಳು ಕೇವಲ 10ವರ್ಷ ಬಾಳಿಕೆ ಬರುತ್ತಿವೆ. ಮಳೆಗಾಲದಲ್ಲಿ ಏರ್ ಕಂಡೀಷನರ್(26ರಿಂದ 28ಡಿಗ್ರಿ ಸೆಲ್ಶಿಯಸ್) ಬಳಸಬಹುದು. ಏರ್ ಕಂಡೀಷನರ್ ಇಂಡೋರ್‌ನಷ್ಟೇ ಔಟ್ಡೋರಿಗೂ ಗಮನ ಅಗತ್ಯ ಎಂದು ಅವರು ತಿಳಿಸಿದರು.

ಇದನ್ನೂ ಓದಿ :

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು. ಮೋಲ್ಟೋ ಕೇರ್ ಸಂಸ್ಥೆಯ ಪ್ರಶಾನ್, ಗಣೇಶ್, ಶರತ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಶಮಿತಾ ಸಹಕರಿಸಿದರು. ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಮುದ್ರದಿಂದಾಗಿ ಕರಾವಳಿ ಪ್ರದೇಶದ ವಾತಾವರಣದಲ್ಲಿ ತೇವಾಂಶ (ಹ್ಯುಮಿಡಿಟಿ) ಹೆಚ್ಚು ಇರುತ್ತದೆ. ಆದುದರಿಂದ ಇಲ್ಲಿನ ವಾತಾವರಣಕ್ಕೆ ಏರ್ ಕೂಲರ್‌ಗಿಂತ ಏರ್ ಕಂಡೀಷನರ್ ಅತೀ ಸೂಕ್ತವಾಗಿದೆ ಎಂದು ಕೃಷ್ಣರಾಜ ತಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ :

ವಾತಾವರಣದಲ್ಲಿ ಸಾಮಾನ್ಯವಾಗಿ ಶೇ.40-60ರಷ್ಟು ತೇವಾಂಶ ಇರ ಬೇಕು. ಶೇ.60ಕ್ಕಿಂತ ಜಾಸ್ತಿ ಇದ್ದರೆ ದೇಹ ದಲ್ಲಿ ಹೆಚ್ಚು ಬೆವರು ಬರುತ್ತದೆ. ಶೇ.40ಕ್ಕಿಂತ ಕಡಿಮೆ ಇದ್ದರೆ ದೇಹ ಒಣಗಿ ಒಡೆಯತ್ತದೆ. ಕರಾವಳಿಯಲ್ಲಿ ತೇವಾಂಶ ಜಾಸ್ತಿ ಇರುವುದರಿಂದ ಬೆವರು ಹೆಚ್ಚಾಗಿರುತ್ತದೆ. ಏರ್ ಕಂಡಿಷನರ್ ಕೋಣೆಯಲ್ಲಿರುವ ತೇವಾಂಶವನ್ನು ಹೊರಗೆ ಹಾಕಿ ಒಳಗೆ ತಂಪಿನ ವಾತಾವರಣ ಸೃಷ್ಠಿಸುತ್ತದೆ. ಕೂಲರ್ ಹೊರಗಡೆ ಗಾಳಿಯಲ್ಲಿರುವ ತೇವಾಂಶವನ್ನು ಒಳಗೆ ತರುತ್ತದೆ. ಆದುದರಿಂದ ತೇವಾಂಶ ಜಾಸ್ತಿ ಇರುವ ಕರಾವಳಿಗೆ ಏರ್ ಕಂಡಿಷನರ್ ಹೆಚ್ಚು ಸೂಕ್ತವಾಗಿದೆ ಎಂದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

12 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

12 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

16 hours ago