Featured

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ..

ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ..

ಕರಾವಳಿಗೆ ಕೂಲರ್‌ಗಿಂದ ಏಸಿ ಸೂಕ್ತ..

ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್‌ನ ನಿರ್ದೇಶಕ ಕೃಷ್ಣರಾಜ ತಂತ್ರಿ

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ. ಇದರಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್‌ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮಗಿರಿಯ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ಏರ್ ಕಂಡೀಷನರ್ ಕಾರ್ಯನಿರ್ವಹಣೆ: ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತಿದ್ದರು.

ಏಸಿಯು ಕೋಣೆಯಲ್ಲಿರುವ ಗಾಳಿಯನ್ನು ಶುದ್ಧಗೊಳಿಸಿ ತಂಪು ಮಾಡುತ್ತದೆ ಹೊರತು ಹೊರಗಿನ ಗಾಳಿಯನ್ನು ಒಳಗಡೆ ತೆಗೆದುಕೊಳ್ಳುವು ದಿಲ್ಲ. ಏಸಿಯ ಇಂಡೋರ್ ಮತ್ತು ಔಡೋರ್ ಯುನಿಟ್‌ಗಳಿಗೆ 10ಅಡಿಗಳ ಅಂತರ ಅಗತ್ಯ ಇರಬೇಕು. ಇಲ್ಲದಿದ್ದರೆ ಅದು ಹೆಚ್ಚು ಕೂಲ್ ಆಗುವುದಿಲ್ಲ ಎಂದರು.

ಇದನ್ನೂ ಓದಿ :

ಇಂದು ವಾತಾವರಣದಲ್ಲಿ ಉಷ್ಣಾಂಶದ ತೀವ್ರ ಏರಿಕೆ ಹಿನ್ನೆಲೆಯಲ್ಲಿ ಮನೆ, ಕಚೇರಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಏರ್ ಕಂಡೀಷನರ್ ಅಳವಡಿಕೆ, ಬಳಕೆ ಹೆಚ್ಚುತ್ತಿದೆ. ಏಸಿ ಆರೋಗ್ಯ ಚೆನ್ನಾಗಿದ್ದರೆ ಅದು ನಮ್ಮ ಆರೋಗ್ಯಕ್ಕೂ ಪೂರಕ ವಾಗಿರುತ್ತದೆ. ಏರ್ ಕಂಡೀಷನರ್ ವ್ಯವಸ್ಥೆಯ ಸಮರ್ಪಕ ಬಳಕೆ, ಸೂಕ್ತ ನಿರ್ವಹಣೆ ಮಾಡದಿದ್ದರೆ ವಿದ್ಯುತ್ ವೆಚ್ಚ ಹೆಚ್ಚಳದ ಜತೆಗೆ ಏಸಿ ಕಾರ್ಯಕ್ಷಮತೆ ಕುಸಿದು, ಅವಸರದ ದುರಸ್ಥಿ, ವೆಚ್ಚಗಳು ಹೆಚ್ಚಲಿವೆ ಎಂದರು.

ಏರ್ ಕಂಡೀಷನರ್‌ಗಳು 24ರಿಂದ 26ಡಿಗ್ರಿ ಸೆಲ್ಶಿಯಸ್‌ನಲ್ಲಿ ಕಾರ್ಯ ನಿರ್ವಹಿಸಿದರೆ ವಿದ್ಯುತ್ ಬಳಕೆ ನಿಯಂತ್ರಣ, ಅನಗತ್ಯ ಒತ್ತಡ ತಪ್ಪಿಸಬಹುದು. ಕರಾವಳಿಯಲ್ಲಿ ಏರ್ ಕಂಡೀಷನರ್‌ಗಳು ಕೇವಲ 10ವರ್ಷ ಬಾಳಿಕೆ ಬರುತ್ತಿವೆ. ಮಳೆಗಾಲದಲ್ಲಿ ಏರ್ ಕಂಡೀಷನರ್(26ರಿಂದ 28ಡಿಗ್ರಿ ಸೆಲ್ಶಿಯಸ್) ಬಳಸಬಹುದು. ಏರ್ ಕಂಡೀಷನರ್ ಇಂಡೋರ್‌ನಷ್ಟೇ ಔಟ್ಡೋರಿಗೂ ಗಮನ ಅಗತ್ಯ ಎಂದು ಅವರು ತಿಳಿಸಿದರು.

ಇದನ್ನೂ ಓದಿ :

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು. ಮೋಲ್ಟೋ ಕೇರ್ ಸಂಸ್ಥೆಯ ಪ್ರಶಾನ್, ಗಣೇಶ್, ಶರತ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಶಮಿತಾ ಸಹಕರಿಸಿದರು. ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಮುದ್ರದಿಂದಾಗಿ ಕರಾವಳಿ ಪ್ರದೇಶದ ವಾತಾವರಣದಲ್ಲಿ ತೇವಾಂಶ (ಹ್ಯುಮಿಡಿಟಿ) ಹೆಚ್ಚು ಇರುತ್ತದೆ. ಆದುದರಿಂದ ಇಲ್ಲಿನ ವಾತಾವರಣಕ್ಕೆ ಏರ್ ಕೂಲರ್‌ಗಿಂತ ಏರ್ ಕಂಡೀಷನರ್ ಅತೀ ಸೂಕ್ತವಾಗಿದೆ ಎಂದು ಕೃಷ್ಣರಾಜ ತಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ :

ವಾತಾವರಣದಲ್ಲಿ ಸಾಮಾನ್ಯವಾಗಿ ಶೇ.40-60ರಷ್ಟು ತೇವಾಂಶ ಇರ ಬೇಕು. ಶೇ.60ಕ್ಕಿಂತ ಜಾಸ್ತಿ ಇದ್ದರೆ ದೇಹ ದಲ್ಲಿ ಹೆಚ್ಚು ಬೆವರು ಬರುತ್ತದೆ. ಶೇ.40ಕ್ಕಿಂತ ಕಡಿಮೆ ಇದ್ದರೆ ದೇಹ ಒಣಗಿ ಒಡೆಯತ್ತದೆ. ಕರಾವಳಿಯಲ್ಲಿ ತೇವಾಂಶ ಜಾಸ್ತಿ ಇರುವುದರಿಂದ ಬೆವರು ಹೆಚ್ಚಾಗಿರುತ್ತದೆ. ಏರ್ ಕಂಡಿಷನರ್ ಕೋಣೆಯಲ್ಲಿರುವ ತೇವಾಂಶವನ್ನು ಹೊರಗೆ ಹಾಕಿ ಒಳಗೆ ತಂಪಿನ ವಾತಾವರಣ ಸೃಷ್ಠಿಸುತ್ತದೆ. ಕೂಲರ್ ಹೊರಗಡೆ ಗಾಳಿಯಲ್ಲಿರುವ ತೇವಾಂಶವನ್ನು ಒಳಗೆ ತರುತ್ತದೆ. ಆದುದರಿಂದ ತೇವಾಂಶ ಜಾಸ್ತಿ ಇರುವ ಕರಾವಳಿಗೆ ಏರ್ ಕಂಡಿಷನರ್ ಹೆಚ್ಚು ಸೂಕ್ತವಾಗಿದೆ ಎಂದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago