Featured

ಉಡುಪಿ  : ಏ.10 ರಿಂದ 20 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೊರೋನಾ ಕರ್ಫ್ಯೂಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ  : ಏ.10 ರಿಂದ 20 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೊರೋನಾ ಕರ್ಫ್ಯೂಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ  (Vishwanews24) : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಕರೋನಕರ್ಫ್ಯೂ ವಿಧಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದಅತಿಅವಶ್ಯಕವೆಂದುಕಂಡುಬಂದಿದ್ದು,ಅದರಂತೆಏ. 10 ರಿಂದ 20 ರ ವರೆಗೆರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆಉಡುಪಿ ನಗರಸಭಾ ವ್ಯಾಪ್ತಿಯಲ್ಲಿ (ಮಣಿಪಾಲ ಸೇರಿದಂತೆ) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿ, ಉಳಿದಂತೆ ಎಲ್ಲಾ ಸೇವೆಗಳನ್ನು /ಸಂಚಾರಗಳನ್ನು ನಿಷೇಧಿಸಿ ಈ
ಕೆಳಕಂಡಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ಆದೇಶ ಹೊರಡಿಸಿರುತ್ತಾರೆ.

ಕಾಪು : ನಿವೃತ್ತ ಸಿ.ಆರ್.ಪಿ.ಎಫ್ ಯೋಧನ ಪತ್ನಿ ವನಜಾಕ್ಷಿ ಅವರಿಗೆ ಸಮ್ಮಾನ, ಗೌರವ ಅರ್ಪಣೆ -Vishwanews24

ವಿವಿಧಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತುಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆಅನುಮತಿ ನೀಡಲಾಗಿದೆ.ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹಎಲ್ಲಾ ಕಾರ್ಖಾನೆಗಳು/ಕಂಪನಿಗಳು/ಸಂಸ್ಥೆಗಳು ಯಥಾರೀತಿಯಲ್ಲಿಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.ಆದರೆ ಸಂಬಂಧಿಸಿದ ಕಾರ್ಮಿಕರು /ನೌಕರರುಕರೋನಕರ್ಪ್ಯೂಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.

ದೂರಸಂಪರ್ಕ ಮತ್ತುಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿತಂತ್ರಜ್ಞಾನ ಮತ್ತು ಮಾಹಿತಿತಂತ್ರಜ್ಞಾನಆಧಾರಿತ ಸಂಸ್ಥೆಗಳ ಸಿಬ್ಬಂದಿಗಳು ರಾತ್ರಿ ಪಾಳಿಯಲ್ಲಿ ಅಧಿಕೃತಕಚೇರಿಗುರುತಿನಚೀಟಿ ಹೊಂದಿ ಸಂಚರಿಸಲುಅನುಮತಿ ನೀಡಲಾಗಿದೆ. ವೈದ್ಯಕೀಯ ಸೇವೆ ಮತ್ತುತುರ್ತುಚಟುವಟಿಕೆಗೆ ಮಾತ್ರಅನುಮತಿ ನೀಡಲಾಗಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್‌ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರಅನುಮತಿ ನೀಡಲಾಗಿದೆ.
ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದದೂರ ಪ್ರಯಾಣಕ್ಕೆಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು. ಮೇಲಿನ ಆದೇಶಗಳನ್ನು ಪಾಲಿಸದೇಇರುವವರ ವಿರುದ್ಧ ವಿಪತ್ತು ನಿರ್ವಹಣಾಕಾಯ್ದೆಮತ್ತು ಐಪಿಸಿ ಸೆಕ್ಷನ್ 188 ಪ್ರಕಾರಪೊಲೀಸ್ ಠಾಣೆಗಳಲ್ಲಿ ನಿಯಮಾನುಸಾರಕ್ರಿಮಿನಲ್ ಪ್ರಕರಣಗಳನ್ನುದಾಖಲಿಸಲು ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ : ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಿ :ಡಾ. ಎಂ.ಟಿ.ರೇಜು -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

41 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

53 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago