ಪಡುಬಿದ್ರೆ : ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ್ದ ಒಂದು ಕೋಟಿ ರೂ. ಅಧಿಕ ಬೆಲೆಯ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಲಾಯಿತು.
30,13,100 ರೂ. ಬೆಲೆಯ 103 ಕೆ.ಜಿ ಗಾಂಜಾ, 9,82,500 ರೂ. ಬೆಲೆಯ ಹೈಡ್ರೋವೀಡ್ ಗಾಂಜಾ, 30,33,000 ರೂ. ಬೆಲೆಯ ಎಂ.ಡಿ.ಎಂ.ಎ ಮಾತ್ರೆಗಳು, 30 ಲಕ್ಷ ರೂ. ಬೆಲೆಯ ಎಲ್.ಎಸ್.ಡಿ ಸ್ಟಿಪ್ಸ್ ಸೇರಿ ಒಟ್ಟು 1,00,28,600 ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ 12, ಉಡುಪಿ ನಗರ ಠಾಣೆಯಲ್ಲಿ 10, ಸಿಇಎನ್ ರಲ್ಲಿ 8, ಕುಂದಾಪುರ 6, ಕಾಪು 5, ಪಡುಬಿದ್ರಿ ಹಾಗು ಕುಂದಾಪುರ ಗ್ರಾಮಾಂತರದಲ್ಲಿ ತಲಾ 2, ಗಂಗೊಳ್ಳಿ, ಹಿರಿಯಡ್ಕ ಮತ್ತು ಶಿರ್ವ ಠಾಣೆಗಳಲ್ಲಿ ತಲಾ 1 ಸೇರಿ 13 ವರ್ಷಗಳಿಂದ ಒಟ್ಟು 50ಕ್ಕೂ ಪ್ರಕರಣಗಳಲ್ಲಿ ಜಪ್ಪಿ ಮಾಡಲಾದ ಮಾದಕ ವಸ್ತುಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್ ಕುಮಾರ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಉಡುಪಿ ಡಿವೈಎಸ್ಪಿ ಸುಧಾಕರ ನಾಯ್ಕ್ ,ಕಾರ್ಕಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್, ವೃತ್ತ ನಿರೀಕ್ಷಕರಾದ ಮಂಜುನಾಥ್, ಸಂಪತ್, ಮಂಜುನಾಥ ಗೌಡ, ಪ್ರಮೋದ್ ಹಾಗು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…