ಪಡುಬಿದ್ರೆ : ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ್ದ ಒಂದು ಕೋಟಿ ರೂ. ಅಧಿಕ ಬೆಲೆಯ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಲಾಯಿತು.
30,13,100 ರೂ. ಬೆಲೆಯ 103 ಕೆ.ಜಿ ಗಾಂಜಾ, 9,82,500 ರೂ. ಬೆಲೆಯ ಹೈಡ್ರೋವೀಡ್ ಗಾಂಜಾ, 30,33,000 ರೂ. ಬೆಲೆಯ ಎಂ.ಡಿ.ಎಂ.ಎ ಮಾತ್ರೆಗಳು, 30 ಲಕ್ಷ ರೂ. ಬೆಲೆಯ ಎಲ್.ಎಸ್.ಡಿ ಸ್ಟಿಪ್ಸ್ ಸೇರಿ ಒಟ್ಟು 1,00,28,600 ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ 12, ಉಡುಪಿ ನಗರ ಠಾಣೆಯಲ್ಲಿ 10, ಸಿಇಎನ್ ರಲ್ಲಿ 8, ಕುಂದಾಪುರ 6, ಕಾಪು 5, ಪಡುಬಿದ್ರಿ ಹಾಗು ಕುಂದಾಪುರ ಗ್ರಾಮಾಂತರದಲ್ಲಿ ತಲಾ 2, ಗಂಗೊಳ್ಳಿ, ಹಿರಿಯಡ್ಕ ಮತ್ತು ಶಿರ್ವ ಠಾಣೆಗಳಲ್ಲಿ ತಲಾ 1 ಸೇರಿ 13 ವರ್ಷಗಳಿಂದ ಒಟ್ಟು 50ಕ್ಕೂ ಪ್ರಕರಣಗಳಲ್ಲಿ ಜಪ್ಪಿ ಮಾಡಲಾದ ಮಾದಕ ವಸ್ತುಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್ ಕುಮಾರ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಉಡುಪಿ ಡಿವೈಎಸ್ಪಿ ಸುಧಾಕರ ನಾಯ್ಕ್ ,ಕಾರ್ಕಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್, ವೃತ್ತ ನಿರೀಕ್ಷಕರಾದ ಮಂಜುನಾಥ್, ಸಂಪತ್, ಮಂಜುನಾಥ ಗೌಡ, ಪ್ರಮೋದ್ ಹಾಗು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…