ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಉಡುಪಿ, : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಲಸಿಕೆ ಹಾಕಿಸಿಕೊಂಡವರಲ್ಲಿ ಅಥವಾ ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪಾಸಿಟಿವ್ ಆಗಿರುವುದು ಪತ್ತೆಯಾಗಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಅವರು ಮಾ.16 ರ ಬೆಳಗ್ಗೆ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿ, “ಬಹಳಷ್ಟು ಜನರು ಲಸಿಕೆಯ ಒಂದೇ ಡೋಸ್ ಪಡೆದು ಸುಮ್ಮನಾಗಿದ್ದಾರೆ. ಕೊರೊನಾ ಲಸಿಕೆಯ ಒಂದನೇ ಡೋಸ್ ಪಡೆದು 28 ದಿನದ ಬಳಿಕ ಎರಡನೇ ಡೋಸ್ ಪಡೆಯದಿದ್ದರೆ ಲಸಿಕೆ ಹಾಕಿಸಿಕೊಂಡು ಯಾವುದೇ ಪ್ರಯೋಜನವಿಲ್ಲ” ಎಂದು ಹೇಳಿದರು.
“ಸರಕಾರದ ಆದೇಶದಂತೆ ಮುಂದಿನೆರಡು ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ ದಂಡ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ ದಂಡ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಸಲಾಗುವುದು, ಮಹಾರಾಷ್ಟ್ರ ಕೇರಳ ರಾಜ್ಯದಲ್ಲಿ ಈಗಾಗಲೇ ಕೇಸು ಹೆಚ್ಚಳವಾಗುತ್ತಿದೆ. ಹೆಚ್ಚಿನ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ತಪ್ಪಿದ್ದಲ್ಲ” ಎಂದು ಹೇಳಿದ್ದಾರೆ.
