ಉಡುಪಿ

ಉಡುಪಿ : ಓಎಲ್ ಎಕ್ಸ್ ನಲ್ಲಿ ಕಿವಿಯೋಲೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿ ಸಾವಿರಾರು ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ವಿದ್ಯಾರ್ಥಿನಿ – Vishwanews24

ಉಡುಪಿ : ಓಎಲ್ ಎಕ್ಸ್ ನಲ್ಲಿ ಕಿವಿಯೋಲೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿ ಸಾವಿರಾರು ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ವಿದ್ಯಾರ್ಥಿನಿ – Vishwanews24

ಉಡುಪಿ : ಓಎಲ್ ಎಕ್ಸ್ ನಲ್ಲಿ ಕಿವಿಯೋಲೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿ ವಿದ್ಯಾರ್ಥಿನಿಯೊಬ್ಬಳು ಸಾವಿರಾರು ರೂಪಾಯಿ ಕಳೆದುಕೊಂಡ ವಂಚನೆಗೊಳಗಾದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖುಷಿ ಮೇಹ್ತಾ (19) ಜ. 16 ರಂದು ತನ್ನ ಕಿವಿಯೋಲೆ ಮಾರಾಟಕ್ಕಿರುವುದಾಗಿ OLX ನಲ್ಲಿ ಜಾಹೀರಾತು ನೀಡಿದ್ದು, ಇದನ್ನು ನೋಡಿ ಯಾರೋ ಅಪರಿಚಿತ ವ್ಯಕ್ತಿ ಕರೆ ಮಾಡಿ ಕಿವಿಯೋಲೆಯನ್ನು ಖರೀದಿಸುವುದಾಗಿ ತಿಳಿಸಿ, ಹಣವನ್ನು ಪೇಟಿಎಂ ಮೂಲಕ ಪಾವತಿಸುವುದಾಗಿ ನಂಬಿಸಿ 5 ಹಾಗೂ 100 ರೂಪಾಯಿಗಳನ್ನು ಖಾತೆಗೆ ಜಮಾ ಮಾಡಿದ್ದಾನೆ. ಆದರೆ ಬಳಿಕ ವಿದ್ಯಾರ್ಥಿನಿಯ ಖಾತೆಯಿಂದ ಹಂತ ಹಂತವಾಗಿ ಒಟ್ಟು 19,018/- ಹಣ ಪೇಟಿಎಂ ಮೂಲಕ ಕಡಿತಗೊಂಡಿರುತ್ತದೆ.

ಇದನ್ನು ಗಮನಿಸಿ , ಅಪರಿಚಿತ ವ್ಯಕ್ತಿಗೆ ತನ್ನ ಖಾತೆಯಿಂದ ಕಡಿತಗೊಂಡ ಹಣದ ಬಗ್ಗೆ ಖುಷಿ ಮೇಹ್ತಾ ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಹಣ ಮರುಪಾವತಿ ಮಾಡುವುದಾಗಿ ನಂಬಿಸಿ, ಬೇರೆ ಯಾವುದಾದರು ಖಾತೆಯ ವಿವರವನ್ನು ಒದಗಿಸುವಂತೆ ತಿಳಿಸಿದ್ದಾನೆ. ಇದನ್ನು ನಂಬಿ ವಿದ್ಯಾರ್ಥಿನಿ ತನ್ನ ಸ್ನೇಹಿತೆಯ ಸಾಯಿ ಚಂದನ Paytm ನಂಬರ್ ನೀಡಿದ್ದಾರೆ.

ಅಪರಿಚಿತ ವ್ಯಕ್ತಿ ಕರೆ ಮಾಡಿ ಸ್ನೇಹಿತೆ ಟಿ. ಸಾಯಿ ಚಂದನರವರ ಮೊಬೈಲ್‌ಗೆ ಬಂದಿರುವ OTP ನಂಬರ್ ವನ್ನು ಪಡೆದು ಸ್ನೇಹಿತೆ ಟಿ.ಸಾಯಿ ಚಂದನರವರ ಖಾತೆಯಿಂದ ಹಂತ ಹಂತವಾಗಿ ಒಟ್ಟು 74,800 ಹಣ Paytm ಮೂಲಕ ಕಡಿತಗೊಂಡಿದೆ. ಒಟ್ಟಾರೆ 93,818 ರೂಪಾಯಿ ಹಣವನ್ನು Paytm ಮೂಲಕ ಕಡಿತಗೊಳಿಸಿ ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

31 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

48 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

55 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago