ಉಡುಪಿ

ಉಡುಪಿ : ಓಎಲ್ ಎಕ್ಸ್ ನಲ್ಲಿ ಕಿವಿಯೋಲೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿ ಸಾವಿರಾರು ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ವಿದ್ಯಾರ್ಥಿನಿ – Vishwanews24

ಉಡುಪಿ : ಓಎಲ್ ಎಕ್ಸ್ ನಲ್ಲಿ ಕಿವಿಯೋಲೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿ ಸಾವಿರಾರು ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ವಿದ್ಯಾರ್ಥಿನಿ – Vishwanews24

ಉಡುಪಿ : ಓಎಲ್ ಎಕ್ಸ್ ನಲ್ಲಿ ಕಿವಿಯೋಲೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿ ವಿದ್ಯಾರ್ಥಿನಿಯೊಬ್ಬಳು ಸಾವಿರಾರು ರೂಪಾಯಿ ಕಳೆದುಕೊಂಡ ವಂಚನೆಗೊಳಗಾದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖುಷಿ ಮೇಹ್ತಾ (19) ಜ. 16 ರಂದು ತನ್ನ ಕಿವಿಯೋಲೆ ಮಾರಾಟಕ್ಕಿರುವುದಾಗಿ OLX ನಲ್ಲಿ ಜಾಹೀರಾತು ನೀಡಿದ್ದು, ಇದನ್ನು ನೋಡಿ ಯಾರೋ ಅಪರಿಚಿತ ವ್ಯಕ್ತಿ ಕರೆ ಮಾಡಿ ಕಿವಿಯೋಲೆಯನ್ನು ಖರೀದಿಸುವುದಾಗಿ ತಿಳಿಸಿ, ಹಣವನ್ನು ಪೇಟಿಎಂ ಮೂಲಕ ಪಾವತಿಸುವುದಾಗಿ ನಂಬಿಸಿ 5 ಹಾಗೂ 100 ರೂಪಾಯಿಗಳನ್ನು ಖಾತೆಗೆ ಜಮಾ ಮಾಡಿದ್ದಾನೆ. ಆದರೆ ಬಳಿಕ ವಿದ್ಯಾರ್ಥಿನಿಯ ಖಾತೆಯಿಂದ ಹಂತ ಹಂತವಾಗಿ ಒಟ್ಟು 19,018/- ಹಣ ಪೇಟಿಎಂ ಮೂಲಕ ಕಡಿತಗೊಂಡಿರುತ್ತದೆ.

ಇದನ್ನು ಗಮನಿಸಿ , ಅಪರಿಚಿತ ವ್ಯಕ್ತಿಗೆ ತನ್ನ ಖಾತೆಯಿಂದ ಕಡಿತಗೊಂಡ ಹಣದ ಬಗ್ಗೆ ಖುಷಿ ಮೇಹ್ತಾ ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಹಣ ಮರುಪಾವತಿ ಮಾಡುವುದಾಗಿ ನಂಬಿಸಿ, ಬೇರೆ ಯಾವುದಾದರು ಖಾತೆಯ ವಿವರವನ್ನು ಒದಗಿಸುವಂತೆ ತಿಳಿಸಿದ್ದಾನೆ. ಇದನ್ನು ನಂಬಿ ವಿದ್ಯಾರ್ಥಿನಿ ತನ್ನ ಸ್ನೇಹಿತೆಯ ಸಾಯಿ ಚಂದನ Paytm ನಂಬರ್ ನೀಡಿದ್ದಾರೆ.

ಅಪರಿಚಿತ ವ್ಯಕ್ತಿ ಕರೆ ಮಾಡಿ ಸ್ನೇಹಿತೆ ಟಿ. ಸಾಯಿ ಚಂದನರವರ ಮೊಬೈಲ್‌ಗೆ ಬಂದಿರುವ OTP ನಂಬರ್ ವನ್ನು ಪಡೆದು ಸ್ನೇಹಿತೆ ಟಿ.ಸಾಯಿ ಚಂದನರವರ ಖಾತೆಯಿಂದ ಹಂತ ಹಂತವಾಗಿ ಒಟ್ಟು 74,800 ಹಣ Paytm ಮೂಲಕ ಕಡಿತಗೊಂಡಿದೆ. ಒಟ್ಟಾರೆ 93,818 ರೂಪಾಯಿ ಹಣವನ್ನು Paytm ಮೂಲಕ ಕಡಿತಗೊಳಿಸಿ ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

11 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

19 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

27 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

34 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

46 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

58 minutes ago