ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಿಸುವ ವಾಹನಗಳು ಓವರ್ಲೋಡ್ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದಲ್ಲದೇ ಅಪಘಾತಕ್ಕೆ ಕಾರಣವಾಗುತ್ತಿವೆ. ಅಂತಹ ವಾಹನಗಳ ವಿರುದ್ಧ ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೆಲವು ಬಸ್ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಆರ್.ಟಿ.ಒ. ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಆಗಿಲ್ಲ. ಪ್ರತೀ ತಿಂಗಳೂ ನಿಯಮ ಉಲ್ಲಂ ಸಿದ ಬಸ್ಗಳ ಮೇಲೆ ಪ್ರಕರಣ ದಾಖಲಿಸಬೇಕು. ಬಸ್ಗಳಿಗೂ ಬಾಗಿಲು ಅಳವಡಿಸಬೇಕು. ಈ ಬಗ್ಗೆ ನಿಗದಿತ ಸಮಯಾವಕಾಶ ನೀಡಿ ಅಳವಡಿಸದಿರುವ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ 18 ಬ್ಲ್ಯಾಕ್ ಸ್ಪಾಟ್ ಗುರುತಿಸಿದ್ದು, ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಇವುಗಳಲ್ಲಿ ಬಹುತೇಕ ಕಾಮ ಗಾರಿ ಕೈಗೊಳ್ಳಲಾಗಿದೆ. ಬಾಕಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಲು ಸೂಚಿಸಲಾಯಿತು.
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…