ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಿಸುವ ವಾಹನಗಳು ಓವರ್ಲೋಡ್ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದಲ್ಲದೇ ಅಪಘಾತಕ್ಕೆ ಕಾರಣವಾಗುತ್ತಿವೆ. ಅಂತಹ ವಾಹನಗಳ ವಿರುದ್ಧ ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೆಲವು ಬಸ್ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಆರ್.ಟಿ.ಒ. ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಆಗಿಲ್ಲ. ಪ್ರತೀ ತಿಂಗಳೂ ನಿಯಮ ಉಲ್ಲಂ ಸಿದ ಬಸ್ಗಳ ಮೇಲೆ ಪ್ರಕರಣ ದಾಖಲಿಸಬೇಕು. ಬಸ್ಗಳಿಗೂ ಬಾಗಿಲು ಅಳವಡಿಸಬೇಕು. ಈ ಬಗ್ಗೆ ನಿಗದಿತ ಸಮಯಾವಕಾಶ ನೀಡಿ ಅಳವಡಿಸದಿರುವ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ 18 ಬ್ಲ್ಯಾಕ್ ಸ್ಪಾಟ್ ಗುರುತಿಸಿದ್ದು, ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಇವುಗಳಲ್ಲಿ ಬಹುತೇಕ ಕಾಮ ಗಾರಿ ಕೈಗೊಳ್ಳಲಾಗಿದೆ. ಬಾಕಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಲು ಸೂಚಿಸಲಾಯಿತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…