ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ  ಮಲಗಿದ್ದ ಶಿಕ್ಷಕ ಅಮಾನತು – Vishwanews24

Featured, ಉಡುಪಿ

ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ  ಮಲಗಿದ್ದ ಶಿಕ್ಷಕ ಅಮಾನತು

ಉಡುಪಿ: ಶಾಲಾ ಕೆಲಸದ ಅವಧಿಯಲ್ಲಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್‌ ಅವರನ್ನು ಡಿಡಿಪಿಐ ಗಣಪತಿ ಕೆ. ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ ಎಂದು ವರದಿಯಾಗಿದೆ.

ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದು, ಘಟನೆಯ ಸತ್ಯಾಸತ್ಯತೆಯ ಅಧ್ಯಯನ ವರದಿ ಪಡೆದು ಅದರ ಆಧಾರದಲ್ಲಿ ತಪ್ಪಿತಸ್ಥರೆಂದು ಕಂಡು ಬಂದ ಕೃಷ್ಣ ಮೂರ್ತಿ ನಾಯಕ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಡಲಾಗಿದೆ ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

ಉಡುಪಿ:  ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24

ಇನ್ನು ಶಿಕ್ಷಕರು ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

ಉಡುಪಿ : ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಶಿಕ್ಷಕ – Vishwanews24

Leave a Reply