Featured

ಉಡುಪಿ : ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಕೂರ್ಮಾರಾವ್ – Vishwanews24

ಉಡುಪಿ : ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಕೂರ್ಮಾರಾವ್ – Vishwanews24

ಉಡುಪಿ : ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತಕಂದಾಯ ಸಚಿವ ಅಶೋಕ್ ಅವರು ಫೆ. 19 ರಂದು ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು,ಸಚಿವರ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಂದಾಯ ಸಚಿವರು ಮೊದಲಿಗೆ ಕಾರ್ಕಳ ತಾಲೂಕಿಗೆ ಭೇಟಿ ನೀಡಿ, ಅಲ್ಲಿ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮ, ಕಂದಾಯ ಮೇಳ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬ್ರಹ್ಮಾವರ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯುಕ್ತ ಕೊಕ್ಕರ್ಣೆ, ಆರೂರು ಮತ್ತು ಕೆಂಜೂರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎಂದರು.

ಗ್ರಾಮ ವಾಸ್ತವ್ಯದ ಪ್ರಯುಕ್ತ ಆಗಮಿಸುವ ಸಚಿವರನ್ನು ಕೊಕ್ಕರ್ಣೆಯ ಬಸ್ ನಿಲ್ದಾಣದ ಬಳಿ ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು, ಕೊಕ್ಕರ್ಣೆ ಕಾರ್ಯಕ್ರಮದ ನಂತರ ನಂತರ ಆರೂರು ತೆರಳುವ ಮಾರ್ಗದಲ್ಲಿ ಕುಡುಬಿ ಜನಾಂಗದವರ ಮನೆಗೆ ಬೇಟಿ ನೀಡಲಿದ್ದಾರೆ. ಸಂಜೆ ಆರೂರಿನಲ್ಲಿ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ಯಕ್ಷಗಾನ , ವೀರಗಾಸೆ, ಡೊಳ್ಳು ಕುಣಿತ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವರು ಆರೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದು, ಸಚಿವರು ತಂಗಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವರು ಕಂದಾಯ ಇಲಾಖೆಗೆ ಸಂಬAಧಿಸಿದ 94 ಸಿ, ಸಿ.ಸಿ, ಸಾಮಾಜಿಕ ಭದ್ರತಾಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ, ಕೋವಿಡ್ ಪರಿಹಾರದ ಚೆಕ್ ವಿತರಣೆ ಹಾಗೂ ನಿವೇಶನದ ಹಕ್ಕು ಪತ್ರ , ವಿವಿಧ ಇಲಾಖೆಯ ಸವಲತ್ತುಗಳನ್ನು ವಿತರಿಸಲಿದ್ದು, ಪ್ರಮುಖ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡುವ ಸ್ಟಾಲ್ ಗಳನ್ನು ಅಳವಡಿಸಲು ಹಾಗೂ ಸಂಬAದಪಟ್ಟ ಗ್ರಾಮಗಳ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. .

ಪೆಬ್ರವರಿ 20 ರಂದು ಬೆಳಗ್ಗೆ ಕೆಂಜೂರು ಗ್ರಾಮದ ಕೊರಗರ ಕಾಲೋನಿಗೆ ಸಚಿವರು ಭೇಟಿ ನೀಡಲಿದ್ದು, ಕೊರಗರ ಮನೆಯಲ್ಲಿ ಅವರೇ ಸಿದ್ದಪಡಿಸಿದ ಉಪಹಾರ ಸೇವಿಸಲಿದ್ದಾರೆ ಎಂದರು.

ಸಚಿವರ ಗ್ರಾಮ ವಾಸ್ಯವ್ಯ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು , ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಹಾಗೂ ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರಿಂದ ಅಗತ್ಯ ಸಹಕಾರ ಪಡೆಯುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಡಾ.ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಕಮೀಷನರ್ ಕೆ.ರಾಜು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

10 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

10 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

13 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

14 hours ago