Featured

ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ , ಆದರೆ ಅದು ಬಿಜೆಪಿ ಕಂಬಳ ಆಗಬಾರದು : ವಿನಯಕುಮಾರ್ ಸೊರಕೆ – vishwanews24

ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ

ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ

ಉಡುಪಿ: 80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕ್ರೆ ಭೂಮಿ ಕಂಬಳ ಸಮಿತಿಗೆ ಹಸ್ತಾಂತರವಾಗಿಲ್ಲ. ಆದ್ದರಿಂದ ಫೆ.28 ರಂದು ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅದು ಬಿಜೆಪಿಯ ಕಂಬಳ ಆಗದೇ ಜಿಲ್ಲಾಡಳಿತದ ಕಂಬಳ ಆಗಬೇಕು. ಸ್ಥಳೀಯರಿಗೆ ಕಂಬಳದಿಂದ ತೊಂದರೆ ಆಗದಂತೆ ಸೂಕ್ತ ವ್ಯವಸ್ಥೆ ಆಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ 👇:

ಕಂಬಳಕ್ಕೆ ಕಾಯ್ದಿರಿಸಿದ ಜಾಗ ಯುವಜನ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ್ದು. ಆ ಇಲಾಖೆಯಿಂದ ಸಮಿತಿಗೆ ಹಸ್ತಾಂತರವಾಗಿಲ್ಲ. ಜಿಲ್ಲಾಡಳಿತವೂ ಯಾವುದೇ ತೀರ್ಮಾನ ಮಾಡಿಲ್ಲ. ಶಾಸಕರು ತಮ್ಮ ಅಕ್ರಮಗಳನ್ನು ಮುಚ್ಚಿಹಾಕಲು ನನ್ನ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದರು.

ಅರಣ್ಯ ಇಲಾಖೆಯ ಭೂಮಿಯಲ್ಲಿ ಕಂಬಳ ಮಾಡಲು ಹೊರಟಿದ್ದರಿಂದ ಅರಣ್ಯ ಇಲಾಖೆ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದೆ. 40 ವರ್ಷ ಗಳಿಂದ 10 ಕುಟುಂಬಗಳು ಕೃಷಿ ಮಾಡುತ್ತಿದ್ದು, ಅವರಿಗೆ ತೊಂದರೆಯಾಗಬಾರದು. ಇದನ್ನೆಲ್ಲ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ಮಾ. 4 ರಂದು ಜಿಲ್ಲಾಡಳಿತ ನಡೆಸಲು ಉದ್ದೇಶಿಸಿದ್ದ ಶಂಕು ಸ್ಥಾಪನೆಯನ್ನು ಕೈಬಿಟ್ಟಿದೆ ಎಂದರು.

ಇದನ್ನೂ ಓದಿ 👇:

ನಾನು ಕಂಬಳದ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪುತ್ತೂರಿನಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಪ್ರಥಮ ಬಾರಿಗೆ ಪುತ್ತೂರು ಕಂಬಳ ಆಯೋಜಿಸಿದ್ದೇನೆ. ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಮುಖರಾದ ಹರೀಶ್ ಕಿಣಿ, ಸಂತೋಷ್ ಬೈರಂಪಳ್ಳಿ, ಇಸ್ಮಾಯಿಲ್ ಆತ್ರಾಡಿ, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

14 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

17 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

17 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

17 hours ago