ಉಡುಪಿ: 80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕ್ರೆ ಭೂಮಿ ಕಂಬಳ ಸಮಿತಿಗೆ ಹಸ್ತಾಂತರವಾಗಿಲ್ಲ. ಆದ್ದರಿಂದ ಫೆ.28 ರಂದು ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅದು ಬಿಜೆಪಿಯ ಕಂಬಳ ಆಗದೇ ಜಿಲ್ಲಾಡಳಿತದ ಕಂಬಳ ಆಗಬೇಕು. ಸ್ಥಳೀಯರಿಗೆ ಕಂಬಳದಿಂದ ತೊಂದರೆ ಆಗದಂತೆ ಸೂಕ್ತ ವ್ಯವಸ್ಥೆ ಆಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಇದನ್ನೂ ಓದಿ 👇:
ಕಂಬಳಕ್ಕೆ ಕಾಯ್ದಿರಿಸಿದ ಜಾಗ ಯುವಜನ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ್ದು. ಆ ಇಲಾಖೆಯಿಂದ ಸಮಿತಿಗೆ ಹಸ್ತಾಂತರವಾಗಿಲ್ಲ. ಜಿಲ್ಲಾಡಳಿತವೂ ಯಾವುದೇ ತೀರ್ಮಾನ ಮಾಡಿಲ್ಲ. ಶಾಸಕರು ತಮ್ಮ ಅಕ್ರಮಗಳನ್ನು ಮುಚ್ಚಿಹಾಕಲು ನನ್ನ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದರು.
ಅರಣ್ಯ ಇಲಾಖೆಯ ಭೂಮಿಯಲ್ಲಿ ಕಂಬಳ ಮಾಡಲು ಹೊರಟಿದ್ದರಿಂದ ಅರಣ್ಯ ಇಲಾಖೆ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದೆ. 40 ವರ್ಷ ಗಳಿಂದ 10 ಕುಟುಂಬಗಳು ಕೃಷಿ ಮಾಡುತ್ತಿದ್ದು, ಅವರಿಗೆ ತೊಂದರೆಯಾಗಬಾರದು. ಇದನ್ನೆಲ್ಲ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ಮಾ. 4 ರಂದು ಜಿಲ್ಲಾಡಳಿತ ನಡೆಸಲು ಉದ್ದೇಶಿಸಿದ್ದ ಶಂಕು ಸ್ಥಾಪನೆಯನ್ನು ಕೈಬಿಟ್ಟಿದೆ ಎಂದರು.
ಇದನ್ನೂ ಓದಿ 👇:
ನಾನು ಕಂಬಳದ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪುತ್ತೂರಿನಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಪ್ರಥಮ ಬಾರಿಗೆ ಪುತ್ತೂರು ಕಂಬಳ ಆಯೋಜಿಸಿದ್ದೇನೆ. ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಮುಖರಾದ ಹರೀಶ್ ಕಿಣಿ, ಸಂತೋಷ್ ಬೈರಂಪಳ್ಳಿ, ಇಸ್ಮಾಯಿಲ್ ಆತ್ರಾಡಿ, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…