Featured

ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ , ಆದರೆ ಅದು ಬಿಜೆಪಿ ಕಂಬಳ ಆಗಬಾರದು : ವಿನಯಕುಮಾರ್ ಸೊರಕೆ – vishwanews24

ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ

ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ

ಉಡುಪಿ: 80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕ್ರೆ ಭೂಮಿ ಕಂಬಳ ಸಮಿತಿಗೆ ಹಸ್ತಾಂತರವಾಗಿಲ್ಲ. ಆದ್ದರಿಂದ ಫೆ.28 ರಂದು ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅದು ಬಿಜೆಪಿಯ ಕಂಬಳ ಆಗದೇ ಜಿಲ್ಲಾಡಳಿತದ ಕಂಬಳ ಆಗಬೇಕು. ಸ್ಥಳೀಯರಿಗೆ ಕಂಬಳದಿಂದ ತೊಂದರೆ ಆಗದಂತೆ ಸೂಕ್ತ ವ್ಯವಸ್ಥೆ ಆಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ 👇:

ಕಂಬಳಕ್ಕೆ ಕಾಯ್ದಿರಿಸಿದ ಜಾಗ ಯುವಜನ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ್ದು. ಆ ಇಲಾಖೆಯಿಂದ ಸಮಿತಿಗೆ ಹಸ್ತಾಂತರವಾಗಿಲ್ಲ. ಜಿಲ್ಲಾಡಳಿತವೂ ಯಾವುದೇ ತೀರ್ಮಾನ ಮಾಡಿಲ್ಲ. ಶಾಸಕರು ತಮ್ಮ ಅಕ್ರಮಗಳನ್ನು ಮುಚ್ಚಿಹಾಕಲು ನನ್ನ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದರು.

ಅರಣ್ಯ ಇಲಾಖೆಯ ಭೂಮಿಯಲ್ಲಿ ಕಂಬಳ ಮಾಡಲು ಹೊರಟಿದ್ದರಿಂದ ಅರಣ್ಯ ಇಲಾಖೆ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದೆ. 40 ವರ್ಷ ಗಳಿಂದ 10 ಕುಟುಂಬಗಳು ಕೃಷಿ ಮಾಡುತ್ತಿದ್ದು, ಅವರಿಗೆ ತೊಂದರೆಯಾಗಬಾರದು. ಇದನ್ನೆಲ್ಲ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ಮಾ. 4 ರಂದು ಜಿಲ್ಲಾಡಳಿತ ನಡೆಸಲು ಉದ್ದೇಶಿಸಿದ್ದ ಶಂಕು ಸ್ಥಾಪನೆಯನ್ನು ಕೈಬಿಟ್ಟಿದೆ ಎಂದರು.

ಇದನ್ನೂ ಓದಿ 👇:

ನಾನು ಕಂಬಳದ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪುತ್ತೂರಿನಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಪ್ರಥಮ ಬಾರಿಗೆ ಪುತ್ತೂರು ಕಂಬಳ ಆಯೋಜಿಸಿದ್ದೇನೆ. ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಮುಖರಾದ ಹರೀಶ್ ಕಿಣಿ, ಸಂತೋಷ್ ಬೈರಂಪಳ್ಳಿ, ಇಸ್ಮಾಯಿಲ್ ಆತ್ರಾಡಿ, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

7 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

42 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

54 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago