ಉಡುಪಿ: ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಗೆ ₹ 300 ಕೋಟಿ ವೆಚ್ಚದ ಯೋಜನೆ ತಯಾರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಕಾಪು ತಾಲ್ಲೂಕಿನ ಮೂಳೂರಿನ ಕಡಲ್ಗೊರೆತ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಹಾಗೂ ಈ ಹಿಂದೆ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಕಡಲ್ಗೊರೆತ ತಡೆಗಾಗಿ ₹100 ಕೋಟಿ ಅಂದಾಜು ವೆಚ್ಚದ ಯೋಜನೆ ತಯಾರಿಸಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಯೋಜನೆಯನ್ನು ಆದಷ್ಟು ಶೀಘ್ರ ಅಂತಿಮಗೊಳಿಸುತ್ತೇವೆ. ವೈಜ್ಞಾನಿಕ ಪರಿಣತರನ್ನು ಕರೆಸಿ ಕಡಲ್ಕೊರೆತಕ್ಕೆ ಯಾವ ಮಾದರಿಯ ತಡೆ ಕಾಮಗಾರಿ ನಡೆಸಿದರೆ ಹೆಚ್ಚು ಸೂಕ್ತ ಎಂದು ಅಧ್ಯಯನ ನಡೆಸಲು ಸೂಚಿಸುತ್ತೇವೆ. ಅನಂತರ ಕ್ರಿಯಾ ಯೋಜನೆಗೆ ಅನುಮೋದನೆ ನೀಡುತ್ತೇವೆ. ಇದು ದೀರ್ಘಾವಧಿಯ ಯೋಜನೆಯಾಗಿದ್ದು, ಅನುಷ್ಠಾನಕ್ಕೆ ಕನಿಷ್ಠ ಎರಡು ವರ್ಷಗಳಾದರೂ ಬೇಕಾಗಬಹುದು ಎಂದು ಹೇಳಿದರು.
ಕಡಲ್ಕೊರೆತ ತಡೆಗೆ ಮದ್ರಾಸ್ ಐಐಟಿಯವರು ಕೆಲವು ಶಿಫಾರಸುಗಳನ್ನು ಮಾಡಿದ್ದಾರೆ. ಅದರಂತೆ 100 ಮೀಟರ್ಗೆ ₹15 ಕೋಟಿ ವೆಚ್ಚವಾಗಬಹುದು. ಇಷ್ಟು ವೆಚ್ಚದ ಕಾಮಗಾರಿ ನಡೆಸುವುದಾದರೆ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಎಸಿ ರಶ್ಮಿ, ಕಾಪು ತಹಶೀಲ್ದಾರ್ ಪ್ರತಿಭಾ, ವಿನಯಕುಮಾರ್ ಸೊರಕೆ, ಅಶೋಕ್ ಕುಮಾರ್ ಕೊಡವೂರು, ಎಂ.ಎ.ಗಫೂರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…