Featured

ಉಡುಪಿ: ಕಡಲ್ಕೊರೆತ ತಡೆಗೆ 300 ಕೋಟಿ ರೂ. ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ – vishwanews24

ಉಡುಪಿ: ಕರಾವಳಿ ಜಿಲ್ಲೆಗಳ ಕಡಲ್ಕೊರೆತ ತಡೆಗೆ 300 ಕೋಟಿ ರೂ. ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಉಡುಪಿ: ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಗೆ ₹ 300 ಕೋಟಿ ವೆಚ್ಚದ ಯೋಜನೆ ತಯಾರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕಾಪು ತಾಲ್ಲೂಕಿನ ಮೂಳೂರಿನ ಕಡಲ್ಗೊರೆತ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಹಾಗೂ ಈ ಹಿಂದೆ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಕಡಲ್ಗೊರೆತ ತಡೆಗಾಗಿ ₹100 ಕೋಟಿ ಅಂದಾಜು ವೆಚ್ಚದ ಯೋಜನೆ ತಯಾರಿಸಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಯೋಜನೆಯನ್ನು ಆದಷ್ಟು ಶೀಘ್ರ ಅಂತಿಮಗೊಳಿಸುತ್ತೇವೆ. ವೈಜ್ಞಾನಿಕ ಪರಿಣತರನ್ನು ಕರೆಸಿ ಕಡಲ್ಕೊರೆತಕ್ಕೆ ಯಾವ ಮಾದರಿಯ ತಡೆ ಕಾಮಗಾರಿ ನಡೆಸಿದರೆ ಹೆಚ್ಚು ಸೂಕ್ತ ಎಂದು ಅಧ್ಯಯನ ನಡೆಸಲು ಸೂಚಿಸುತ್ತೇವೆ. ಅನಂತರ ಕ್ರಿಯಾ ಯೋಜನೆಗೆ ಅನುಮೋದನೆ ನೀಡುತ್ತೇವೆ. ಇದು ದೀರ್ಘಾವಧಿಯ ಯೋಜನೆಯಾಗಿದ್ದು, ಅನುಷ್ಠಾನಕ್ಕೆ ಕನಿಷ್ಠ ಎರಡು ವರ್ಷಗಳಾದರೂ ಬೇಕಾಗಬಹುದು ಎಂದು ಹೇಳಿದರು.

ಕಡಲ್ಕೊರೆತ ತಡೆಗೆ ಮದ್ರಾಸ್ ಐಐಟಿಯವರು ಕೆಲವು ಶಿಫಾರಸುಗಳನ್ನು ಮಾಡಿದ್ದಾರೆ. ಅದರಂತೆ 100 ಮೀಟರ್‌ಗೆ ₹15 ಕೋಟಿ ವೆಚ್ಚವಾಗಬಹುದು. ಇಷ್ಟು ವೆಚ್ಚದ ಕಾಮಗಾರಿ ನಡೆಸುವುದಾದರೆ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಎಸಿ ರಶ್ಮಿ, ಕಾಪು ತಹಶೀಲ್ದಾರ್ ಪ್ರತಿಭಾ, ವಿನಯಕುಮಾರ್ ಸೊರಕೆ, ಅಶೋಕ್ ಕುಮಾರ್ ಕೊಡವೂರು, ಎಂ.ಎ.ಗಫೂರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago