ಉಡುಪಿ: ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಗೆ ₹ 300 ಕೋಟಿ ವೆಚ್ಚದ ಯೋಜನೆ ತಯಾರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಕಾಪು ತಾಲ್ಲೂಕಿನ ಮೂಳೂರಿನ ಕಡಲ್ಗೊರೆತ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಹಾಗೂ ಈ ಹಿಂದೆ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಕಡಲ್ಗೊರೆತ ತಡೆಗಾಗಿ ₹100 ಕೋಟಿ ಅಂದಾಜು ವೆಚ್ಚದ ಯೋಜನೆ ತಯಾರಿಸಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಯೋಜನೆಯನ್ನು ಆದಷ್ಟು ಶೀಘ್ರ ಅಂತಿಮಗೊಳಿಸುತ್ತೇವೆ. ವೈಜ್ಞಾನಿಕ ಪರಿಣತರನ್ನು ಕರೆಸಿ ಕಡಲ್ಕೊರೆತಕ್ಕೆ ಯಾವ ಮಾದರಿಯ ತಡೆ ಕಾಮಗಾರಿ ನಡೆಸಿದರೆ ಹೆಚ್ಚು ಸೂಕ್ತ ಎಂದು ಅಧ್ಯಯನ ನಡೆಸಲು ಸೂಚಿಸುತ್ತೇವೆ. ಅನಂತರ ಕ್ರಿಯಾ ಯೋಜನೆಗೆ ಅನುಮೋದನೆ ನೀಡುತ್ತೇವೆ. ಇದು ದೀರ್ಘಾವಧಿಯ ಯೋಜನೆಯಾಗಿದ್ದು, ಅನುಷ್ಠಾನಕ್ಕೆ ಕನಿಷ್ಠ ಎರಡು ವರ್ಷಗಳಾದರೂ ಬೇಕಾಗಬಹುದು ಎಂದು ಹೇಳಿದರು.
ಕಡಲ್ಕೊರೆತ ತಡೆಗೆ ಮದ್ರಾಸ್ ಐಐಟಿಯವರು ಕೆಲವು ಶಿಫಾರಸುಗಳನ್ನು ಮಾಡಿದ್ದಾರೆ. ಅದರಂತೆ 100 ಮೀಟರ್ಗೆ ₹15 ಕೋಟಿ ವೆಚ್ಚವಾಗಬಹುದು. ಇಷ್ಟು ವೆಚ್ಚದ ಕಾಮಗಾರಿ ನಡೆಸುವುದಾದರೆ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಎಸಿ ರಶ್ಮಿ, ಕಾಪು ತಹಶೀಲ್ದಾರ್ ಪ್ರತಿಭಾ, ವಿನಯಕುಮಾರ್ ಸೊರಕೆ, ಅಶೋಕ್ ಕುಮಾರ್ ಕೊಡವೂರು, ಎಂ.ಎ.ಗಫೂರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…