ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ ಅಕ್ಕ ಕೆಫೆ ಪ್ರಾರಂಭವಾಗಿದ್ದು, ಸಂಜೀವಿನಿ ಮಹಿಳೆಯರು ತಯಾರಿಸಿದ ಉಟೋಪಹಾರ ದೊರೆಯಲಿದೆ.
ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಅನುಷ್ಠಾನಕ್ಕೆ ತಂದ ಅಕ್ಕ ಕೆಫೆ ಯೋಜನೆಯು ದುಡಿಯುವ ಮಹಿಳೆಯರ ಕೈಗಳಿಗೆ ಕೆಲಸ ನೀಡುವುದರ ಜೊತೆಗೆ ಕಡಿಮೆ ದರದಲ್ಲಿ ಶುಚಿ, ರುಚಿಯಾದ ಊಟ ಉಪಾಹಾರ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಪ್ರಸ್ತುತ ಕಲ್ಯಾಣಪುರ ಗ್ರಾಮ ಪಂಚಾಯತ್ನ ಬ್ರಹ್ಮಶ್ರೀ ಸಂಜೀವಿನಿ ಒಕ್ಕೂಟದ ಮಹಿಳೆಯರು ಅಕ್ಕ ಕೆಫೆಯನ್ನು ನಿರ್ವಹಿಸಲಿದ್ದು, ಈಗಾಗಲೇ ಕ್ಯಾಟರಿಂಗ್ ಉದ್ಯಮದಲ್ಲಿ ಅನುಭವ ಹೊಂದಿರುವ ಇವರು ಆಹಾರ ತಯಾರಿಕೆಯಲ್ಲಿ ಪರಿಣಿತಿ ಹೊಂದಿದ್ದಾರೆ. ಈ ಅಕ್ಕ ಕೆಫೆಯನ್ನು ಸಂಪೂರ್ಣ ಸಂಜೀವಿನಿ ಮಹಿಳೆಯರೇ ನಿರ್ವಹಿಸುವುದು ವಿಷೇಶವಾಗಿದೆ.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…