ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇರ್ವರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇರ್ವರನ್ನು ವಶಕ್ಕೆ ಪಡೆದಿದ್ದಾರೆ.
ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೆರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…