ಉಡುಪಿ: ಬ್ರಹ್ಮಕಲಶೋತ್ಸವ ವೈಭವದಿಂದ ಸಂಪನ್ನಗೊಂಡ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಾಲಯಕ್ಕೆ ಇಂದು ಕೇಂದ್ರ ರೈತರ ಕಲ್ಯಾಣ ಮತ್ತು ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.
ದೇಗುಲದ ಕಾಮಗಾರಿ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದ ಸಚಿವೆ ಕಡಿಯಾಳಿ ಮಹಿಷಮರ್ದಿನಿ ದೇಗುಲದ ಶಿಲ್ಪಕಲೆ, ತಿರುಗುವ ಮುಚ್ಚಿಗೆ, ಕಾವ್ಯಶಿಲ್ಪ ಮತ್ತು ಕರಸೇವಕರ ಮೂಲಕ ದೇಗುಲದ ತಳಪಾಯ ಮತ್ತು ನಿರಂತರ ಶಿಸ್ತುಬದ್ಧ ಸ್ವಯಂಸೇವಕರ ಪಡೆ ಕೇವಲ ರಾಜ್ಯ ಮಾತ್ರವಲ್ಲದೆ ರಾಷ್ಟ್ರಕ್ಕೆ ಮಾದರಿಯಾಗಿದೆ. ಈ ರೀತಿಯ ಭವ್ಯ ದೇಗುಲ ಗ್ರಾಮಸ್ಥರು ಮತ್ತು ದೇವರ ಪರಮ ಭಕ್ತರು ಸೇರಿ ಕಟ್ಟಿ ಭಗವಂತನಿಗೆ ಸಮರ್ಪಣೆ ಮಾಡಿರುವುದು ಸರ್ವರಿಗೂ ಜಗನ್ಮಾತೆ ಮಹಿಷಮರ್ದಿನಿ ಸನ್ಮಂಗಲ ಉಂಟು ಮಾಡಲಿ ಎಂದು ಹೇಳಿದರು.
ತಾನು ಕೂಡ ಈ ಕರಸೇವೆಯಲ್ಲಿ ಸ್ವಯಂಸೇವಕಿಯಾಗಿ ಭಾಗವಹಿಸಿರುವುದು ತನ್ನ ಭಾಗ್ಯ ಎಂದು ನೆನಪಿಸಿಕೊಂಡರು. ಈ ಸಂದರ್ಭದಲ್ಲಿ ದೇವ ಸೇವೆ ಸಮಾಜ ಸೇವೆ ಎಂಬ ವಿಶಿಷ್ಟ ಪರಿಕಲ್ಪನೆಯಲ್ಲಿ ಪ್ರಚಾರಕ್ಕೆ ಬಳಸಿದ ಕೊಡೆಯನ್ನು ಉಡುಪಿ ನಿವಾಸಿ ಶರ್ವಾಣಿಯವರಿಗೆ ಹಸ್ತಾಂತರಿಸಲಾಯಿತು.
ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ,ರಾಘವೇಂದ್ರ ಕಿಣಿ ದೇವಳದ ಕಾಮಗಾರಿಯ ವಿವರಣೆ ನೀಡಿದರು.
ದೇವಳದ ಪ್ರಧಾನ ಅರ್ಚಕ ಕೆ ರಾಧಾಕೃಷ್ಣ ಉಪಾಧ್ಯಾಯ, ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ಸಂಧ್ಯಾ ಪುಭು, ಶಶಿಕಲಾ ಭರತ್, ಮಂಜುನಾಥ್ ಹೆಬ್ಬಾರ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ಸಂಧ್ಯಾ ರಮೇಶ್ ನಗರಸಭಾ ಸದಸ್ಯರಾದ ಗೀತಾ ಶೇಟ್,ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಭಾರತಿ ಚಂದ್ರಶೇಖರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಸುಜಾತ ಸತೀಶ್, ಚೇತನಾ ಚಂದ್ರಶೇಖರ್ ಪ್ರಭು, ಸಾಮಾಜಿಕ ಧುರೀಣ ಪುದೀಪ್ ರಾವ್,ದೇವಸ್ಥಾನದ ಅಧಿಕಾರಿ ಗಂಗಾಧರ ಹೆಗ್ಡೆ ಉಪಸ್ಥಿತರಿದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…