ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ (75) ಅವರು ಕೋಟೇಶ್ವರದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು.
ಪಯಣ, ಪಲಾಯನ, ಪರಿಭ್ರಮಣ, ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ,ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು ಇತರ ಕಥೆಗಳು ಹಾಗೂ ಅಸ್ತಮಾ ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿದ್ದಾರೆ. ಅತ್ಯುತ್ತಮ ಸಂಘಟಕರು, ಅಂಕಣ ಬರೆಹಗಾರರಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು.
ಸಾಹಿತ್ಯ , ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಇವರ ಸೇವೆ ಅನನ್ಯವಾದುದು. ಇವರ ನಿಧನ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ವೆಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಹಾಗೂ ಡಾ.ಎನ್. ಭಾಸ್ಕರಾಚಾರ್ಯರು, ಲೇಖಕ ಪ್ರಕಾಶಕರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ. ಶಾರದಾ ಭಟ್ ಅವರ ಇಚ್ಛೆಯಂತೆ ಅವರ ದೇಹವನ್ನು ಸಂಶೋಧನೆಗಾಗಿ ಮಣಿಪಾಲ ಆಸ್ಪತ್ರೆಗೆ ನೀಡಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…