ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ (75) ಅವರು ಕೋಟೇಶ್ವರದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು.
ಪಯಣ, ಪಲಾಯನ, ಪರಿಭ್ರಮಣ, ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ,ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು ಇತರ ಕಥೆಗಳು ಹಾಗೂ ಅಸ್ತಮಾ ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿದ್ದಾರೆ. ಅತ್ಯುತ್ತಮ ಸಂಘಟಕರು, ಅಂಕಣ ಬರೆಹಗಾರರಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು.
ಸಾಹಿತ್ಯ , ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಇವರ ಸೇವೆ ಅನನ್ಯವಾದುದು. ಇವರ ನಿಧನ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ವೆಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಹಾಗೂ ಡಾ.ಎನ್. ಭಾಸ್ಕರಾಚಾರ್ಯರು, ಲೇಖಕ ಪ್ರಕಾಶಕರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ. ಶಾರದಾ ಭಟ್ ಅವರ ಇಚ್ಛೆಯಂತೆ ಅವರ ದೇಹವನ್ನು ಸಂಶೋಧನೆಗಾಗಿ ಮಣಿಪಾಲ ಆಸ್ಪತ್ರೆಗೆ ನೀಡಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…