ಉಡುಪಿ: ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ಪ್ರಖ್ಯಾತ ವಿಮರ್ಶಕ ಹಾಗೂ ಜನಪರ ಹೋರಾಟಗಾರರಾದ ಜಿ .ರಾಜಶೇಖರ್(75) ಅವರು ಅನಾರೋಗ್ಯದಿಂದ ಬುಧವಾರ ಉಡುಪಿಯ ಖಾಸಗಿ ಆಶ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದ ರಾಜಶೇಖರ್ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಗಂಭೀರವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ 11:15ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ್ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ರಾಜಶೇಖರ್ ಅವರು 1946ರಲ್ಲಿ ಜನಿಸಿದರು. ನಂತರ ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ಮುಗಿಸಿ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿ ನಂತರ ಎಲ್ಐಸಿಯಲ್ಲಿ ಕಾರ್ಯನಿರ್ವಹಿಸಿದ್ದರು. ಸಾಹಿತ್ಯ -ಸಮಾಜ ಹಾಗೂ ಸಾಂಸ್ಕೃತಿಕ ರಾಜಕಾರಣ ಸೇರಿದಂತೆ ಅವರು ನಿರಂತರವಾಗಿ ಬರೆಯುತ್ತಿದ್ದರು. ಅಷ್ಟೇ ಅಲ್ಲದೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆಯೂ ಕೂಡ ಬರೆಯುತ್ತಿದ್ದರು.
ರಾಜಶೇಖರ ಅವರ ಬಹುವಚನ ಭಾರತ ಕೃತಿಗೆ 2015ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಆದರೆ ಅದನ್ನು ಅವರು ಸ್ವೀಕರಿಸಲು ನಿರಾಕರಿಸಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…