Featured

ಉಡುಪಿ : ಕಮಲಾಕ್ಷಿ ಸೊಸೈಟಿ ಗ್ರಾಹಕರಿಗೆ ನೂರಾರು ಕೋಟಿ ವಂಚನೆ ಸದನದಲ್ಲಿ ಪ್ರಸ್ತಾಪಿಸಿ ನ್ಯಾಯ ಒದಗಿಸಲು ಸರ್ಕಾರಕ್ಕೆ ಆಗ್ರಹ : ಯಶ್ಪಾಲ್ ಸುವರ್ಣ vishwanews24

ಉಡುಪಿ : ಕಮಲಾಕ್ಷಿ ಸೊಸೈಟಿ ಗ್ರಾಹಕರಿಗೆ ನೂರಾರು ಕೋಟಿ ವಂಚನೆ ಸದನದಲ್ಲಿ ಪ್ರಸ್ತಾಪಿಸಿ ನ್ಯಾಯ ಒದಗಿಸಲು ಸರ್ಕಾರಕ್ಕೆ ಆಗ್ರಹ : ಯಶ್ಪಾಲ್ ಸುವರ್ಣ

ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿಯಲ್ಲಿ ನೂರಾರು ಕೋಟಿ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ವಿಸ್ತೃತ ಮಾಹಿತಿ ಕೋರಿದ್ದು, ತನಿಖೆಯ ಪ್ರಗತಿಯ ಬಗ್ಗೆಯೂ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿ ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ಒದಗಿಸಲು ರಾಜ್ಯ ಸರ್ಕಾರವನ್ನು ಅಗ್ರಹಿಸುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಈಗಾಗಲೇ ಹಲವಾರು ಮಂದಿ ಸಂತ್ರಸ್ತ ಠೇವಣಿದಾರರು ಶಾಸಕರ ಕಚೇರಿಗೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿ ಠೇವಣಿ ಹಣ ವಾಪಾಸು ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ.

ಈಗಾಗಲೇ ಮುಖ್ಯಮಂತ್ರಿಗಳು ಹಣಕಾಸು ಸಂಸ್ಥೆಗಳ ವಂಚನೆಯಿಂದ ಠೇವಣಿದಾರರ ಹಿತಾಸಕ್ತಿ ರಕ್ಷಣೆ ಮಾಡುವ ಸಂಬಂಧ ಕಾನೂನು ತಿದ್ದುಪಡಿಗೆ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ 2024 ಈಗಾಗಲೇ ಸಚಿವ ಸಂಪುಟ ಅನುಮೋದಿಸಿದ್ದು, ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ಮುಂದಾಗಿದ್ದು, ಇದೇ ಸಂದರ್ಭದಲ್ಲಿ ಸರ್ಕಾರ ತಕ್ಷಣ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಂಚನೆ ಮಾಡಿದ ವ್ಯಕ್ತಿಗಳ ಹಾಗೂ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಹರಾಜು ಮಾಡಿ ಹಣವನ್ನು ಠೇವಣಿದಾರರಿಗೆ ನೀಡಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.

ಉಡುಪಿಯ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ಯಾಂಕಿಂಗ್ ನಿಯಮಾವಳಿಯನ್ನು ಮೀರಿ ಬೇನಾಮಿ ಹೆಸರಿನಲ್ಲಿ ಠೇವಣಿ ಇರಿಸಿದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಾರ್ವಜನಿಕರ ದೂರಿನ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ ಸೂಚನೆಯ ಮೇರೆಗೆ ಸಹಕಾರಿ ಸಂಘಗಳ ಜಂಟಿ ನಿರ್ದೇಶಕರು ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕರಿಗೆ ತಕ್ಷಣ ಪರಿಶೀಲನೆ ನಡೆಸಿ ಮುಂದಿನ ಕ್ರಮಕ್ಕೆ ಸ್ಪಷ್ಟ ಅಭಿಪ್ರಾಯ ಹಾಗೂ ಪೂರಕ ದಾಖಲೆಯೊಂದಿಗೆ ಜರೂರು ವರದಿ ನೀಡುವಂತೆ ಸೂಚನೆ ನೀಡಿದ್ದು, ಸಹಕಾರಿ ವ್ಯವಸ್ಥೆಯ ಮೇಲೆ ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗಂಭೀರವಾಗಿ ಪರಿಗಣಿಸಿ ತಕ್ಷಣ ವರದಿ ನೀಡುವಂತೆ ಆಗ್ರಹಿಸುವುದಾಗಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

6 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

6 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

6 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

6 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

9 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 hours ago