ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿಯಲ್ಲಿ ನೂರಾರು ಕೋಟಿ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ವಿಸ್ತೃತ ಮಾಹಿತಿ ಕೋರಿದ್ದು, ತನಿಖೆಯ ಪ್ರಗತಿಯ ಬಗ್ಗೆಯೂ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿ ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ಒದಗಿಸಲು ರಾಜ್ಯ ಸರ್ಕಾರವನ್ನು ಅಗ್ರಹಿಸುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈಗಾಗಲೇ ಹಲವಾರು ಮಂದಿ ಸಂತ್ರಸ್ತ ಠೇವಣಿದಾರರು ಶಾಸಕರ ಕಚೇರಿಗೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿ ಠೇವಣಿ ಹಣ ವಾಪಾಸು ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ.
ಈಗಾಗಲೇ ಮುಖ್ಯಮಂತ್ರಿಗಳು ಹಣಕಾಸು ಸಂಸ್ಥೆಗಳ ವಂಚನೆಯಿಂದ ಠೇವಣಿದಾರರ ಹಿತಾಸಕ್ತಿ ರಕ್ಷಣೆ ಮಾಡುವ ಸಂಬಂಧ ಕಾನೂನು ತಿದ್ದುಪಡಿಗೆ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ 2024 ಈಗಾಗಲೇ ಸಚಿವ ಸಂಪುಟ ಅನುಮೋದಿಸಿದ್ದು, ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ಮುಂದಾಗಿದ್ದು, ಇದೇ ಸಂದರ್ಭದಲ್ಲಿ ಸರ್ಕಾರ ತಕ್ಷಣ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಂಚನೆ ಮಾಡಿದ ವ್ಯಕ್ತಿಗಳ ಹಾಗೂ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಹರಾಜು ಮಾಡಿ ಹಣವನ್ನು ಠೇವಣಿದಾರರಿಗೆ ನೀಡಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಉಡುಪಿಯ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ಯಾಂಕಿಂಗ್ ನಿಯಮಾವಳಿಯನ್ನು ಮೀರಿ ಬೇನಾಮಿ ಹೆಸರಿನಲ್ಲಿ ಠೇವಣಿ ಇರಿಸಿದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಾರ್ವಜನಿಕರ ದೂರಿನ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ ಸೂಚನೆಯ ಮೇರೆಗೆ ಸಹಕಾರಿ ಸಂಘಗಳ ಜಂಟಿ ನಿರ್ದೇಶಕರು ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕರಿಗೆ ತಕ್ಷಣ ಪರಿಶೀಲನೆ ನಡೆಸಿ ಮುಂದಿನ ಕ್ರಮಕ್ಕೆ ಸ್ಪಷ್ಟ ಅಭಿಪ್ರಾಯ ಹಾಗೂ ಪೂರಕ ದಾಖಲೆಯೊಂದಿಗೆ ಜರೂರು ವರದಿ ನೀಡುವಂತೆ ಸೂಚನೆ ನೀಡಿದ್ದು, ಸಹಕಾರಿ ವ್ಯವಸ್ಥೆಯ ಮೇಲೆ ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗಂಭೀರವಾಗಿ ಪರಿಗಣಿಸಿ ತಕ್ಷಣ ವರದಿ ನೀಡುವಂತೆ ಆಗ್ರಹಿಸುವುದಾಗಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…