ಜಿಲ್ಲೆಯಾದ್ಯಂತ ಜನವರಿ 21ರಿಂದ ಜನವರಿ 29 ರವರೆಗೆ “ವಿಜಯ ಸಂಕಲ್ಪ ಅಭಿಯಾನ” ನಡೆಯುತ್ತಿದ್ದು, ಇಂದು ದಿನಾಂಕ 21-01-2023 ರಂದು ಕರಂಬಳ್ಳಿ ವಾರ್ಡಿನ ಬೂತ್ ಸಂಖ್ಯೆ 146 ವ್ಯಾಪ್ತಿಯಲ್ಲಿ ನಡೆದ “ವಿಜಯ ಸಂಕಲ್ಪ ಅಭಿಯಾನ” ದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಕರಂಬಳ್ಳಿ ವಾರ್ಡಿನ ಬೂತ್ ಸಂಖ್ಯೆ 146 ವ್ಯಾಪ್ತಿಯ ಮನೆ ಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಳೆ 2018 ರಿಂದ ಈ ವರೆಗೆ ಶಾಸಕ ರಘುಪತಿ ಭಟ್ ಅವರು ಮಂಜೂರುಗೊಳಿಸಿದ ಅನುದಾನದ ಸಮಗ್ರ ವಿವರದ ಸಾಧನೆಯ ಕಿರುಹೊತ್ತಿಗೆ ನೀಡಿ 8000090009 ನಂಬರಿಗೆ ಕರೆ ನೀಡುವ ಮೂಲಕ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ವಿಜಯ ಸಂಕಲ್ಪ ಅಭಿಯಾನದ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ಬೂತ್ ಅಧ್ಯಕ್ಷರಾದ ಪಾಂಡುರಂಗ ಶೆಟ್ಟಿಗಾರ್, ಗಿರೀಶ್ ಕೆ, ಜಯಕರ ಆಚಾರ್ಯ, ಸತ್ಯನಾರಾಯಣ, ಕಾರ್ಯಕರ್ತರಾದ ಮಂಜುಳಾ ಪ್ರಸಾದ್, ಉಷಾ ಪೂಜಾರಿ, ಗಿರೀಶ್ ಉಪಸ್ಥಿತರಿದ್ದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…