ಉಡುಪಿ: ಕರಾವಳಿಗೆ ರೆಡ್ ಅಲರ್ಟ್‌ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಉಡುಪಿ: ಕರಾವಳಿಗೆ ರೆಡ್ ಅಲರ್ಟ್‌ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಉಡುಪಿ: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದರೊಂದಿಗೆ ಜೂ.22ರಿಂದ 24ರ ನಡುವಿನ ಅವಧಿಯಲ್ಲಿ ಸಾಧಾರಣದಿಂದ (64.5ಮಿ.ಮೀ- 115.5ಮಿ.ಮೀ.)ದಿಂದ ಭಾರೀ ಮಳೆ (115.5 ರಿಂದ 204.4ಮಿ.ಮೀ) ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ 204.4ಮಿ.ಮೀ.ಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆ ಇದ್ದು ರಾಜ್ಯ ಕರಾವಳಿಯಲ್ಲಿ ರೆಡ್ ಅಲರ್ಟ್‌ನ್ನು ಘೋಷಿಸಲಾಗಿದೆ ಎಂದು ಹಮಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ – vishwanews24

ಅಲ್ಲದೇ ಇಂದು ಸಂಜೆಯಿಂದ ಜೂ.21ರ ಮಧ್ಯರಾತ್ರಿ11:30ರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಮಂಗಳೂರಿನವರೆಗೆ, ಉಡುಪಿ ಜಿಲ್ಲೆಯ ಬೈಂದೂರಿನಿಂದ ಕಾಪುವಿನವರೆಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಜಲಿವರೆಗಿನ ಕಡಲಿನಲ್ಲಿ 2.0ಮೀ.ನಿಂದ 2.7ಮೀ.ವರೆಗಿನ ಎತ್ತರದ ಸಮುದ್ರದಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಕಾಪು ಶೇಖರ ಆಚಾರ್ಯ ನಿಧನ :ತೀವ್ರ ಸಂತಾಪ : vishwanews24

 

Leave a Reply