Featured

ಉಡುಪಿ: ಕರಾವಳಿಯಲ್ಲಿ ಮತ್ತೊಮ್ಮೆ ದೈವ ಪವಾಡ : ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು ಹುಡುಕಿಕೊಟ್ಟ ಅಚ್ಚರಿ ಘಟನೆ – vishwanews24

ಉಡುಪಿ: ಕರಾವಳಿಯಲ್ಲಿ ಮತ್ತೊಮ್ಮೆ ದೈವ ಪವಾಡ : ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು 24 ಗಂಟೆಯೊಳಗೆ  ಹಿಡಿದು ಕೊಟ್ಟ ಬಬ್ಬು ಸ್ವಾಮಿ ದೈವ

ಉಡುಪಿ: ಬಬ್ಬು ಸ್ವಾಮಿ ದೈವದ ಕಾರ್ಣಿಕ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು ದೈವ 24 ಗಂಟೆಯೊಳಗೆ ಹುಡುಕಿಕೊಟ್ಟ
ಅಚ್ಚರಿಯ ಘಟನೆ ಉಡುಪಿಯಲ್ಲಿ ನಡೆದಿದೆ.

ಚಿಟ್ಪಾಡಿ ಕಸ್ತೂರ್ಬಾ ನಗರದ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳ್ಳತನ ನಡೆದಿತ್ತು. ಕಳ್ಳನೊಬ್ಬ ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಿದ್ದನು. ಜು.5 ರಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು.

ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಸಾಮೂಹಿಕ ಪ್ರಾರ್ಥನೆ ಮಾಡಿದ್ದರು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನಿಸಿದ್ದರು. ಮಾತ್ರವಲ್ಲದೆ, ಊರಿನ ಸಂಕಷ್ಟ ಬಗೆಹರಿಸುವ ದೈವದ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಭಕ್ತರ ಪ್ರಾರ್ಥನೆಯಿಂದ ಕಳ್ಳನನ್ನು 24 ಗಂಟೆಯೊಳಗೆ ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅಚ್ಚರಿ ಎಂಬಂತೆ ಜು. 6ರಂದು ಬೆಳಗ್ಗೆ ಕಳ್ಳನನ್ನು ಸಿಕ್ಕಿದ್ದಾನೆ.

ನಗರದ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಮಲಗಿರೋದು ಗೊತ್ತಾಗಿದೆ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕರು ಕಳ್ಳನ ಗುರುತು ಪತ್ತೆ ಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆ ಮೂಲದ ಮುದುಕಪ್ಪ ಕಾಣೆಕೆ ಡಬ್ಬಿ ಕದ್ದು ಸಿಕ್ಕಿಬಿದ್ದ ಕಳ್ಳ. ಈತ ಬಾಗಲಕೋಟೆಗೆ ಹೋಗಬೇಕಾದವನು ಬಸ್​ ನಿಲ್ದಾಣದಲ್ಲಿಯೇ ನಿದ್ದೆ ಮಾಡಿ ಬಾಕಿಯಾಗಿದ್ದನು. ಬೆಳಿಗ್ಗೆ ಎಂಟು ಗಂಟೆಯಾದರೂ ನಿದ್ದೆ ಮಂಪರಿನಲ್ಲಿ ಮಲಗಿದ್ದನು.

ಮುದುಕಪ್ಪ ದೈವಸ್ಥಾನಗಳಲ್ಲಿ ಕಳ್ಳತನ ಮಾಡುವ ಚಾಳಿಯನು ಹೊಂದಿದ್ದನು. ಚಿಟ್ಪಾಡಿಯ ನಂತರ ಉದ್ಯಾವರ ಪರಿಸರದಲ್ಲೂ ಕಳ್ಳತನ ಮಾಡಿದ್ದನು. ದೋಚಿದ ಹಣದೊಂದಿಗೆ ಬಾಗಲಕೋಟೆಗೆ ಹೋಗಲು ತಯಾರಿ ನಡೆಸಿದ್ದನು. ಬಸ್ ಸಿಗದ ಕಾರಣ ಮಲಗಿದ್ದಲ್ಲೇ ಬಾಕಿಯಾಗಿದ್ದನು. ಆದರೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ. ಇತ್ತ ಭಕ್ತರು ಬಬ್ಬು ಸ್ವಾಮಿ ದೈವದ ಕಾರ್ಣಿಕಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇನ್ನು ವರ್ಷದ ಹಿಂದೆ ಸನ್ನಿಧಾನದಲ್ಲಿ ಇದೇ ರೀತಿಯ ಪವಾಡ ನಡೆದಿತ್ತು. ಸನ್ನಿಧಾನದ ಬೋರ್​ವೆಲ್ ನಲ್ಲಿ ನೀರು ಸಿಗದೇ ಹೋದಾಗ ಸಾಮೂಹಿಕ ಪ್ರಾರ್ಥನೆ ನಡೆದಿತ್ತು. ಪ್ರಾರ್ಥನೆ ನಡೆದ ಬೆನ್ನಲ್ಲೇ ನೀರು ಆಕಾಶದೆತ್ತರಕ್ಕೆ ಚಿಮ್ಮಿತ್ತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago