Featured

ಉಡುಪಿ : ಕರಾವಳಿಯ ನಾಡದೋಣಿ ಮೀನುಗಾರಿಕೆಗೆ 30 ಲಕ್ಷ ಲೀ.ಸೀಮೆಎಣ್ಣೆ ಬಿಡುಗಡೆ :- ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕರಾವಳಿಯ ನಾಡದೋಣಿ ಮೀನುಗಾರಿಕೆಗೆ 30 ಲಕ್ಷ ಲೀ.ಸೀಮೆಎಣ್ಣೆ ಬಿಡುಗಡೆ :- ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆ ಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು.

ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಸಚಿವರು, ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು, ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತವನ್ನು ಕಾಯುವಂತೆ ಕೇಳಿಕೊಂಡಿದ್ದರು.

ಕೇಂದ್ರ ಕೃಷಿ ರಾಜ್ಯ ಸಚಿವರ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಇಂದು (ದಿನಾಂಕ 02.11.22) ಕರ್ನಾಟಕ ಸರ್ಕಾರಕ್ಕೆ 2022-23ನೇ ಪಾಲಿನ 3000KL (30.00 ಲಕ್ಷ ಲೀಟರ್) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಈ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕರಾವಳಿಯ ಮೀನುಗಾರರ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸಿ, ನಾಡ ದೋಣಿ ಮೀನುಗಾರಿಕೆಗೆ ಅಗತ್ಯವಿರುವ ಸೀಮೆ ಎಣ್ಣೆಯನ್ನು ಬಿಡುಗಡೆ ಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಪೆಟ್ರೋಲಿಯಂ ಸಚಿವರಿಗೆ, ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಧನ್ಯವಾದಗಳನ್ನು ತಿಳಿಸಿರುತ್ತಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago