ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆ ಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು.
ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಸಚಿವರು, ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು, ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತವನ್ನು ಕಾಯುವಂತೆ ಕೇಳಿಕೊಂಡಿದ್ದರು.
ಕೇಂದ್ರ ಕೃಷಿ ರಾಜ್ಯ ಸಚಿವರ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಇಂದು (ದಿನಾಂಕ 02.11.22) ಕರ್ನಾಟಕ ಸರ್ಕಾರಕ್ಕೆ 2022-23ನೇ ಪಾಲಿನ 3000KL (30.00 ಲಕ್ಷ ಲೀಟರ್) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಈ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕರಾವಳಿಯ ಮೀನುಗಾರರ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸಿ, ನಾಡ ದೋಣಿ ಮೀನುಗಾರಿಕೆಗೆ ಅಗತ್ಯವಿರುವ ಸೀಮೆ ಎಣ್ಣೆಯನ್ನು ಬಿಡುಗಡೆ ಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಪೆಟ್ರೋಲಿಯಂ ಸಚಿವರಿಗೆ, ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಧನ್ಯವಾದಗಳನ್ನು ತಿಳಿಸಿರುತ್ತಾರೆ.
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…