ಉಡುಪಿ: ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ಕನ್ಯಾಕುಮಾರಿಯಿಂದ ನೇರ ಸುಮಾರು 50 ನಾಟಿಕಲ್ ಮೈಲು ದೂರದಲ್ಲಿ ಫೆ.8ರಂದು ಕರ್ನಾಟಕದ ಆಳ ಸಮುದ್ರ ದೋಣಿಗಳು ಮೀನುಗಾರಿಕೆ ಮಾಡುತ್ತಿರುವಾಗ ಅನ್ಯ ರಾಜ್ಯದ ಬೋಟುಗಳು ಕರ್ನಾಟಕದ ಬೋಟುಗಳನ್ನು ಸುತ್ತುವರಿದು ಸೀಸ, ಕಲ್ಲು, ಮರದ ತುಂಡುಗಳಿಂದ ಜಖಂಗೊಳಿಸಿ, ರಾಜ್ಯದ ಮೀನುಗಾರರ ಮೇಲೆ ಹಲ್ಲೆ ಮಾಡಿ, ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ದೋಚಿಕೊಂಡು ಹೋಗಿದ್ದಾರೆ. ಈಗಾಗಲೇ ಆಳ ಸಮುದ್ರ ಮೀನುಗಾರರ ಸಮಿತಿಗಳು ಹಾಗೂ ಸಂಘಗಳು ಈ ಅಮಾನವೀಯ ಕೃತ್ಯವನ್ನು ಉಗ್ರವಾಗಿ ಖಂಡಿಸಿವೆ. ಸಂಬಂಧಪಟ್ಟ ಇಲಾಖೆ ಹಾಗೂ ಸಚಿವರಿಗೂ ಮನವಿ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕರ್ನಾಟಕದ ಮೀನುಗಾರರಿಗೆ ಆಗಿರುವ ಮಾನಸಿಕ ಕಿರುಕುಳಕ್ಕೆ ಪರಿಹಾರ ಹಾಗೂ ಆರ್ಥಿಕ ನಷ್ಟವನ್ನು ಭರಿಸುವಂತೆ ಮತ್ತು ಮುಂದಿನ ದಿನಗಳಲ್ಲಿ ಕರ್ನಾಟಕದ ಕರಾವಳಿ ಮೀನುಗಾರರಿಗೆ ಸೂಕ್ತ ಭದ್ರತೆ ಒದಗಿಸಿ, ನ್ಯಾಯಯುತವಾಗಿ ಮೀನುಗಾರಿಕೆಗೆ ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಯವರಲ್ಲಿ ಪ್ರಮೋದ್ ಮಧ್ವರಾಜ್ ಮನವಿ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…